ಬ್ರೇಕಿಂಗ್ ನ್ಯೂಸ್
03-07-26 01:21 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 3: ಕಲ್ಯಾಣ ಮಂಟಪ ಒಂದರಲ್ಲಿ ಮತದಾರರನ್ನು ಸೇರಿಸಿ ಎಸ್ಐಆರ್ ಪ್ರಕ್ರಿಯೆ ನಡೆಸಿದ ಬೂತ್ ಮಟ್ಟದ(ಬಿಎಲ್ಓ) ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ತನಿಖೆ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ರಾಮನಗರ ಜಿಲ್ಲಾಧಿಕಾರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅನ್ಬುಕುಮಾರ್, ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ರಾಮನಗರ ಡಿಸಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಸದ್ಯ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮ ನಡೆಯುತ್ತಿದೆ. ನಿಯಮಗಳ ಪ್ರಕಾರ, ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಪರಿಶೀಲನೆ ನಡೆಸಬೇಕು ಹಾಗೂ ನಿಗದಿತ ಅರ್ಜಿಗಳನ್ನು ವಿತರಿಸಬೇಕು. ಆದರೆ ರಾಮನಗರ ನಗರಸಭೆ ವ್ಯಾಪ್ತಿಯ ವಾರ್ಡ್ ನಂಬರ್ 23ರ ಟಿಪ್ಪು ನಗರದ ಕಲ್ಯಾಣ ಮಂಟಪವೊಂದರಲ್ಲಿ ಬಿಎಲ್ಒಗಳು ಮನೆ ಮನೆಗೆ ಹೋಗುವ ಬದಲು, ಜನರನ್ನು ಒಂದೇ ಕಡೆ ಸೇರಿಸಿ ‘ಎಸ್ಐಆರ್ ಕ್ಯಾಂಪ್’ ನಡೆಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿಡಿಯೋ ಬಿಡುಗಡೆ ಮಾಡಿ ಗಂಭೀರ ಆರೋಪ ಮಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದಲ್ಲದೆ, ರಾಮನಗರದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಬಾಂಗ್ಲಾ ಮೂಲದವರಿದ್ದು ಅವರನ್ನು ಅಕ್ರಮವಾಗಿ ಮತಪಟ್ಟಿಗೆ ಸೇರಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದರು.

ನಿಯಮ ಉಲ್ಲಂಘಿಸಿ ಕಲ್ಯಾಣ ಮಂಟಪದಲ್ಲಿ ಕ್ಯಾಂಪ್ ನಡೆಸಿದ ಅಧಿಕಾರಿಗಳನ್ನು ತಕ್ಷಣವೇ ವಿಚಾರಣೆಗೆ ಒಳಪಡಿಸಬೇಕು. ತನಿಖೆಯ ಸಂಪೂರ್ಣ ವರದಿಯನ್ನು ವಿಳಂಬವಿಲ್ಲದೆ ತಮಗೆ ಸಲ್ಲಿಸಬೇಕು ಎಂದು ಡಿಸಿಗೆ ಆದೇಶಿಸಿದ್ದಾರೆ. ನಿಯಮ ಉಲ್ಲಂಘನೆ ಸಾಬೀತಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆಯೋಗದ ಮೂಲಗಳು ತಿಳಿಸಿವೆ.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm