ಬ್ರೇಕಿಂಗ್ ನ್ಯೂಸ್
10-07-26 07:42 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 10: ರಾಮಮಂದಿರ ನಿರ್ಮಾಣದ ಶ್ರೇಯಸ್ಸು ಪಡೆದವರೇ, ದೇಣಿಗೆ ಹಣದ ಕಳ್ಳತನದ ಹೊಣೆಯನ್ನೂ ಹೊತ್ತುಕೊಳ್ಳಬೇಕು ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ಪರೋಕ್ಷವಾಗಿ ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರೇ ಹೊಣೆಯಾಗಬೇಕು ಎಂದು ಟಾಂಗ್ ನೀಡಿದ್ದಾರೆ.
ದೇಣಿಗೆ ಹಣ ಕಳವು ಮಾಡಿದವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಲ್ಲದೆ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಈ ಬಗ್ಗೆ ಬಹಿರಂಗ ಸುದ್ದಿಗೋಷ್ಠಿ ನಡೆಸುವಂತೆ ಸವಾಲು ಹಾಕಿದರು. ರಾಮ ಮಂದಿರ ನಿರ್ಮಾಣದ ಶ್ರೇಯಸ್ಸನ್ನು ನೀವು ಪಡೆದಿದ್ದರೆ, 'ಚಂದಾ ಚೋರಿ'ಯ ಶ್ರೇಯಸ್ಸನ್ನೂ ನೀವೇ ಪಡೆಯಬೇಕು. ನೀವು ನೋಂದಾಯಿತ ಸಂಸ್ಥೆಯಲ್ಲದಿದ್ದರೂ 'ದಕ್ಷಿಣೆ' ಪಡೆಯುತ್ತೀರಿ. ಅದರಲ್ಲಿ ಎಷ್ಟು ಹಣ ನಿಮ್ಮ ಬಳಿ ಬಂದಿದೆ? ನಿಮ್ಮೊಳಗೇ ಕುಳಿತು ಚರ್ಚೆ ಮಾಡುವ ಬದಲು ಸಾರ್ವಜನಿಕರ ಮುಂದೆ ಬನ್ನಿ. ಕಳ್ಳರು ಯಾರು, ಎಷ್ಟು ಹಣ ನಿಮ್ಮ ಬಳಿ ಬಂದಿದೆ, ನೀವು ಮತ್ತು ಪ್ರಧಾನಮಂತ್ರಿ ಏಕೆ ಮೌನವಾಗಿದ್ದೀರಿ ಎಂಬುದನ್ನು ತಿಳಿಸಿ. ಮೋಹನ್ ಭಾಗವತ್ ಹಾಗೂ ಉಳಿದವರಿಗೆ ನಾನು ಬಹಿರಂಗ ಸುದ್ದಿಗೋಷ್ಠಿ ನಡೆಸುವಂತೆ ಸವಾಲು ಹಾಕುತ್ತೇನೆ ಎಂದು ಹೇಳಿದರು.
ಇದೇ ವೇಳೆ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ಪ್ರಧಾನಿ ಮೋದಿ ವಿರುದ್ಧವೂ ಅವರು ಟೀಕಾಪ್ರಹಾರ ನಡೆಸಿದರು. ಪ್ರಧಾನಿ ಮೋದಿ ನಡೆಸುವ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮವನ್ನು ಉಲ್ಲೇಖಿಸಿದ ಅವರು, "ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪೇ ಚರ್ಚಾ" ಅಥವಾ "ಒಎಸ್ಎಂ (ಆನ್-ಸ್ಕ್ರೀನ್ ಮಾರ್ಕಿಂಗ್) ಪೇ ಚರ್ಚಾ" ಯಾವಾಗ ನಡೆಸುತ್ತಾರೆ ಎಂದು ಪ್ರಶ್ನಿಸಿದರು. ಕಳೆದ 10 ವರ್ಷಗಳಲ್ಲಿ ಸುಮಾರು 90 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಸರ್ಕಾರ ಅಸಾಮರ್ಥ್ಯದಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸಿದ್ದಾರೆ. ಇದಕ್ಕೆ ಯಾರು ಹೊಣೆ? ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಎಲ್ಲಿದ್ದಾರೆ? ಅವರು ಇನ್ನೂ ರಾಜೀನಾಮೆ ನೀಡದಿರುವುದೇಕೆ? ಕಳೆದ 10 ವರ್ಷಗಳಲ್ಲಿ ಸುಮಾರು 90 ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ. ಆದರೆ ಸರ್ಕಾರಕ್ಕೆ ಅದರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಭಾರತದ ಭವಿಷ್ಯವನ್ನು ಹೀಗೆ ನೋಡಿಕೊಳ್ಳುತ್ತೀರಾ? 'ವಿಕಸಿತ ಭಾರತ' ನಿರ್ಮಿಸಬೇಕಾದ ಯುವಜನರೊಂದಿಗೆ ಈ ರೀತಿಯ ವರ್ತನೆಯೇ? ಪ್ರಧಾನ ಮಂತ್ರಿ 'ಪರೀಕ್ಷಾ ಪೇ ಚರ್ಚಾ' ನಡೆಸಲು ಆಸಕ್ತಿ ತೋರಿಸುತ್ತಾರೆ. ಹಾಗಾದರೆ 'ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪೇ ಚರ್ಚಾ' ಅಥವಾ 'ಒಎಸ್ಎಂ ಪೇ ಚರ್ಚಾ' ಯಾವಾಗ ನಡೆಸುತ್ತಾರೆ?" ಎಂದು ಪ್ರಶ್ನಿಸಿದರು.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm