ಬ್ರೇಕಿಂಗ್ ನ್ಯೂಸ್
11-07-26 01:48 pm HK News Staffer ಕರ್ನಾಟಕ
ಮಂಗಳೂರು, ಜುಲೈ 11: ಹಾಸನದ ಎಸ್ಡಿಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಮಾನಸರೋಗ ಹಾಗೂ ಮನೋವಿಜ್ಞಾನ ವಿಭಾಗದ ಮೂವರು ಸ್ನಾತಕೋತ್ತರ ವಿದ್ಯಾರ್ಥಿಗಳು ಚಲಿಸುತ್ತಿದ್ದ ರೈಲಿನಲ್ಲೇ ಗರ್ಭಿಣಿಗೆ ಸುರಕ್ಷಿತ ಹೆರಿಗೆ ಮಾಡಿಸಿ ತಾಯಿ- ಮಗುವಿನ ಜೀವ ಉಳಿಸುವ ಮೂಲಕ ಮಾನವೀಯತೆ ಹಾಗೂ ವೈದ್ಯಕೀಯ ಕೌಶಲ್ಯಕ್ಕೆ ಮಾದರಿಯಾಗಿದ್ದಾರೆ.
ಡಾ. ರಶ್ಮಿ ಬೀಳಗಿ, ಡಾ. ಶಾಹಿನ್ ಎಂ ಮತ್ತು ಡಾ. ಲತಾಶ್ರೀ ಎನ್ ಅವರು ವಾರಾಣಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಇಯ(ಬಿಎಚ್ಯು) ನಡೆಯುತ್ತಿದ್ದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲು ಹಾಸನದಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಸಹ ಪ್ರಯಾಣಿಕೆಯಾಗಿದ್ದ ಪೂರ್ಣ ಗರ್ಭಿಣಿಗೆ ಹೆರಿಗೆ ನೋವು ಆರಂಭವಾಗಿ, ಗರ್ಭಜಲ ಸೋರಿಕೆಯಾಗುತ್ತಿರುವುದನ್ನು ಗಮನಿಸಿದ ಅವರು ಕೂಡಲೇ ಪರಿಸ್ಥಿತಿಯನ್ನು ಪರಿಶೀಲಿಸಿ ಚಿಕಿತ್ಸೆ ಆರಂಭಿಸಿದರು.
ಗರ್ಭಿಣಿಯ ಕುಟುಂಬದವರು ಗರ್ಭಧಾರಣೆ ಅಪಾಯಕಾರಿಯಾಗಿದೆ, ಮಗು ಗಂಭೀರ ಸ್ಥಿತಿಯಲ್ಲಿದೆ ಹಾಗೂ ಸಹಜ ಹೆರಿಗೆ ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದರೆಂದು ಹೇಳಿದ್ದರು. ಚಿಕಿತ್ಸೆ ವೆಚ್ಚದ ಬಗ್ಗೆಯೂ ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮೂವರು ವೈದ್ಯರು ಕುಟುಂಬದವರಿಗೆ ಧೈರ್ಯ ತುಂಬಿ, ರೈಲಿನಲ್ಲೇ ಸಾಧ್ಯವಾದಷ್ಟು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಿ ತುರ್ತು ಹೆರಿಗೆಗೆ ಸಿದ್ಧತೆ ನಡೆಸಿದರು.
ಹೆರಿಗೆಯ ವೇಳೆ ಮಗುವಿನ ಕುತ್ತಿಗೆಯ ಸುತ್ತ ಹೊಕ್ಕುಳ ಬಳ್ಳಿ ಸುತ್ತಿಕೊಂಡಿರುವುದು (ನುಕಲ್ ಕಾರ್ಡ್) ಪತ್ತೆಯಾಯಿತು. ಡಾ. ರಶ್ಮಿ ಬೀಳಗಿ ಅವರು ಅತ್ಯಂತ ಎಚ್ಚರಿಕೆಯಿಂದ ಹೊಕ್ಕುಳ ಬಳ್ಳಿಯನ್ನು ಸರಿಪಡಿಸಿದರೆ, ಡಾ. ಶಾಹಿನ್ ಎಂ ಹಾಗೂ ಡಾ. ಲತಾಶ್ರೀ ಎನ್ ಅವರು ಹೆರಿಗೆ ಪ್ರಕ್ರಿಯೆಗೆ ನೆರವಾಗಿ ಮಗುವನ್ನು ಸುರಕ್ಷಿತವಾಗಿ ಹೊರತಂದರು. ಜನನದ ನಂತರ ಮಗುವಿಗೆ ಸ್ವಲ್ಪ ಸಮಯ ಪುನರುಜ್ಜೀವನ (ರೆಸಸಿಟೇಶನ್) ನೀಡಲಾಗಿದ್ದು, ಬಳಿಕ ಆರೋಗ್ಯಕರವಾಗಿ ಅಳುವ ಮೂಲಕ ಉತ್ತಮ ಪ್ರತಿಕ್ರಿಯೆ ನೀಡಿತು.
ಸೀಮಿತ ವೈದ್ಯಕೀಯ ಸೌಲಭ್ಯಗಳ ನಡುವೆಯೂ ಹೊಕ್ಕುಳ ಬಳ್ಳಿಯನ್ನು ಸುರಕ್ಷಿತವಾಗಿ ಕತ್ತರಿಸಿ ಕಟ್ಟಿ, ತಾಯಿ-ಮಗುವಿನ ನಡುವೆ ತಕ್ಷಣವೇ ಚರ್ಮ- ಚರ್ಮದ ಸ್ಪರ್ಶ (ಸ್ಕಿನ್-ಟು-ಸ್ಕಿನ್ ಕಾಂಟ್ಯಾಕ್ಟ್) ಕಲ್ಪಿಸಲಾಯಿತು. ನಂತರ ಪ್ಲಸೆಂಟಾ ಹೊರಬರಲು ವಿಳಂಬವಾದಾಗ ಅದನ್ನೂ ಯಶಸ್ವಿಯಾಗಿ ನಿರ್ವಹಿಸಿದರು. ಬಳಿಕ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಮುಂದಿನ ನಿಲ್ದಾಣದಲ್ಲಿ ಆಂಬುಲೆನ್ಸ್ ವ್ಯವಸ್ಥೆ ಮಾಡಿ ತಾಯಿ ಮತ್ತು ನವಜಾತ ಶಿಶುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು.
ಘಟನೆಯ ಕುರಿತು ಎಸ್ಡಿಎಂಇ ಸೊಸೈಟಿಯ ನಿರ್ದೇಶಕ ಶ್ರೇಯಸ್ ಕುಮಾರ್ ಡಿ ಮಾತನಾಡಿ, "ವೈದ್ಯರ ಕರ್ತವ್ಯ ಆಸ್ಪತ್ರೆಗಳಿಗಷ್ಟೇ ಸೀಮಿತವಲ್ಲ. ತುರ್ತು ಪರಿಸ್ಥಿತಿ ಎಲ್ಲಿಯೇ ಎದುರಾದರೂ ಸೇವೆ ಸಲ್ಲಿಸುವುದು ವೈದ್ಯಕೀಯ ವೃತ್ತಿಯ ಮೂಲ ಧರ್ಮ. ನಮ್ಮ ವಿದ್ಯಾರ್ಥಿಗಳ ಸಮಯೋಚಿತ ನಿರ್ಧಾರ, ತಂಡದ ಕಾರ್ಯಕ್ಷಮತೆ ಹಾಗೂ ಮಾನವೀಯ ಸೇವೆ ಸಂಸ್ಥೆಯ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ," ಎಂದು ಹೇಳಿದರು.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm