ಬ್ರೇಕಿಂಗ್ ನ್ಯೂಸ್
13-07-26 10:32 am HK News Staffer ಕರ್ನಾಟಕ
ಬೆಂಗಳೂರು, ಜುಲೈ 13: ರಾಜ್ಯದಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳ ಆಡಳಿತಾವಧಿ ಮುಕ್ತಾಯವಾಗಿದ್ದು, ಮುಂದಿನ 3-4 ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಕೆಲವು ಗ್ರಾಮ ಪಂಚಾಯತಿಗಳ ಮೇಲ್ದರ್ಜೆ ಮತ್ತು ವಿಲೀನದ ಕಾರಣಗಳಿಂದಾಗಿ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಯೂ ನಡೆಯುತ್ತಿದೆ. ಇನ್ನೆರಡು ತಿಂಗಳಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಮೀಸಲಾತಿ ಪಟ್ಟಿಯೊಂದಿಗೆ ರಾಜ್ಯ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು. ವರದಿ ಸಲ್ಲಿಕೆಯಾದ 45 ದಿನಗಳೊಳಗೆ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸಲಿದೆ ಎಂದು ಸಚಿವ ಖಂಡ್ರೆ ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಸರ್ಕಾರಿ ಸಿಬ್ಬಂದಿ ಬಹುತೇಕ ಅದರ ಕೆಲಸದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಚುನಾವಣೆ ತಯಾರಿಗೆ ಹೆಚ್ಚಿನ ಕಾಲಾವಕಾಶದ ಅಗತ್ಯವಿದೆ. ಆದರೂ ಅಕ್ಟೋಬರ್- ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದವರು ವಿವರಿಸಿದರು.
ಗ್ರಾಮೀಣ ಭಾಗದಲ್ಲಿ 'ಇ-ಸ್ವತ್ತು' ಕುರಿತಾಗಿ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಎಸ್ಐಆರ್ ಪ್ರಕ್ರಿಯೆ ಮುಗಿದ ತಕ್ಷಣ ಮನೆ ಬಾಗಿಲಿಗೆ ಹೋಗಿ ಇ-ಸ್ವತ್ತು ನೀಡುವ ಕಾರ್ಯಕ್ರಮ ಜಾರಿಗೆ ತರಲಾಗುವುದು. ಆದರೆ, ಬಿ ಖರಾಬು ಜಮೀನುಗಳಲ್ಲಿ ನಿರ್ಮಿಸಿರುವ ಲೇಔಟ್ಗಳಿಗೆ ಇ-ಸ್ವತ್ತು ನೀಡಲು ಸಾಧ್ಯವಿಲ್ಲ. ಈ ಬಗ್ಗೆ ಕಂದಾಯ ಇಲಾಖೆಯ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.
ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಬರಬೇಕಿದ್ದ 2,186.20 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ. ತಾಂತ್ರಿಕ ಸಮಸ್ಯೆ ನೆಪವೊಡ್ಡಿ ಹಣ ತಡೆಹಿಡಿಯುವುದು ಸರಿಯಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದ ಸಂಸದರೆಲ್ಲರೂ ಒಗ್ಗೂಡಿ ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಅವರು ಮನವಿ ಮಾಡಿದರು.
ಸರ್ಕಾರವು ಪಂಚಾಯತಿ ಚುನಾವಣೆಗೆ ಸಿದ್ಧತೆಗಳನ್ನು ನಡೆಸುತ್ತಿದ್ದು, ಕ್ಷೇತ್ರಗಳ ವಿಂಗಡಣೆ ಪೂರ್ಣಗೊಂಡ ನಂತರ ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಇದರೊಂದಿಗೆ, ಕೇಂದ್ರದಿಂದ ಬಾಕಿ ಇರುವ ಅನುದಾನ ಬಿಡುಗಡೆಗೂ ರಾಜ್ಯ ಸರ್ಕಾರ ಪ್ರಯತ್ನಿಸಲಾಗುವುದು ಎಂದು ಖಂಡ್ರೆ ತಿಳಿಸಿದ್ದಾರೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm