ಬ್ರೇಕಿಂಗ್ ನ್ಯೂಸ್
07-01-21 11:06 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜನವರಿ 07: ನಕಲಿ ಅರ್ ಎಸ್ ಎಸ್ ನಾಯಕ ಸ್ವಾಮಿ ಅಲಿಯಾಸ್ ಯುವರಾಜ್ ಖಾತೆಯಿಂದ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿರುವ ಪ್ರಕರಣ ಸಂಬಂಧ ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ತನಿಖೆ ಕಂಟಕ ಎದುರಾಗಿದೆ.
ಸ್ವಾಮಿ ಖಾತೆಯಿಂದ ಹಣ ವರ್ಗಾವಣೆ ಪ್ರಕರಣ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಶುಕ್ರವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗಲು ಸೂಚಿಸಿ ರಾಧಿಕಾ ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದಾರೆ. ರಾಧಿಕಾ ಕುಮಾರಸ್ವಾಮಿಗೆ ನೋಟಿಸ್ ನೀಡಿರುವುದನ್ನು ಖಚಿತ ಪಡಿಸಿದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ , ನಾಳೆ ಬೆಳಗ್ಗೆ ಹನ್ನೊಂದು ಗಂಟೆಗೆ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣದಲ್ಲಿ ನಕಲಿ ಅರ್ ಎಸ್ ಎಸ್ ನಾಯಕ ಸ್ವಾಮಿ ಅಲಿಯಾಸ್ ಯುವರಾಜ್ ಬಂಧನಕ್ಕೆ ಒಳಗಾಗಿದ್ದ. ಬಂಧನ ಬಳಿಕ ಆತನ ವಿರುದ್ಧ ಎಂಟು ದೂರು ಬಂದಿದ್ದವು. ಹೆಚ್ಚಿನ ತನಿಖೆ ನಡೆಸಿದಾಗ ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಅವರ ಸಹೋದರ ರವಿರಾಜ್ ಬ್ಯಾಂಕ್ ಖಾತೆಗೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿರುವ ಅಂಶ ಬೆಳಕಿಗೆ ಬಂದಿತ್ತು. ರವಿರಾಜ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ ಬಳಿಕ ರಾಧಿಕಾ ಕುಮಾರಸ್ವಾಮಿಯ ಹೆಸರು ಬಹಿರಂಗವಾಗಿತ್ತು.
ಇದು ಸುದ್ದಿಯಾಗುತ್ತಿದ್ದಂತೆ ರಾಧಿಕಾ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದ್ದರು. ಜ್ಯೋತಿಷಿಯಾಗಿ ಸ್ವಾಮಿ ನಮ್ಮ ಕುಟುಂಬಕ್ಕೆ ಪರಿಚಯ. ನಾಟ್ಯರಾಣಿ ಸಿನಿಮಾ ನಿರ್ಮಾಣಕ್ಕಾಗಿ ನಾನು ಅವರ ಬಳಿ ಪ್ರಸ್ತಾಪಿಸಿದ್ದೆ. ಹೀಗಾಗಿ ಅವರು ನನ್ನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ವರ್ಗಾವಣೆ ಮಾಡಿದ್ದು ಯಾರು ಎಂದು ಪರಿಶೀಲಿಸಲು ಹೋಗಿಲ್ಲ ಎಂದು ಸ್ಪಷ್ಡಪಡಿಸಿದ್ದರು. ಇದಾದ ಬೆನ್ನಲ್ಲೇ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗಲು ಸೂಚಿಸಿ ನೋಟಿಸ್ ನೀಡಿದ್ದಾರೆ.

ರಾಧಿಕಾ ಕುಮಾರಸ್ವಾಮಿ ಸ್ವಾಮಿ ಜತೆಗೂಡಿ ಯಾವುದಾದರೂ ಡೀಲಿಂಗ್ ಮಾಡಿದ್ದರಾ ? ಇಲ್ಲವೇ ನಿಜವಾಗಿಯೂ ಸಿನಿಮಾ ನಿರ್ಮಾಣಕ್ಕೆ ಸಾಲ ಪಡೆದಿದ್ದರಾ ಎಂಬುದನ್ನು ಸಾಕ್ಷಿ ಸಮೇತ ರಾಧಿಕ ಸ್ಪಷ್ಟನೆ ನೀಡಬೇಕಾಗುತ್ತದೆ. ಸ್ವಾಮಿ ಖಾತೆಯಿಂದ ಅಷ್ಡು ದೊಡ್ಡ ಮೊತ್ತ ಪಡೆದಿರುವ ಬಗ್ಗೆ ಯಾವುದಾದರೂ ಕರಾರು ಮಾಡಿಕೊಂಡಿದ್ದಲ್ಲಿ ಬಚಾವ್ ಆಗಲಿದ್ದಾರೆ. ಇಲ್ಲದಿದ್ದಲ್ಲಿ ರಾಧಿಕಾ ಅವರಿಗೆ ಕಷ್ಡ ಎದುರಾಗಲಿದೆ.
ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಢಿ ವೇಳೆ ನನ್ನ ಖಾತೆಗೆ ಯಾರಿಂದ ಹಣ. ಬಂದಿದೆಯೋ ಪರಿಶೀಲಿಸೋಕೆ ಹೋಗಿಲ್ಲ. ಸ್ವಾಮಿ ಅವರ ಅಣ್ಣನ ಖಾತೆಯಿಂದ ಬರಲಿದೆ ಎಂದು ಅವರು ಹೇಳಿದ್ದರು. ಆದರೆ ಈ ಹೇಳಿಕೆಯನ್ನು ಸಿಸಿಬಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಬ್ಯಾಂಕ್ ಖಾತೆಗೆ ಕೋಟ್ಯಂತರ ರೂಪಾಯಿ ಬಂದರೆ ಅದರ ಬಗ್ಗೆ ಯಾರು ತಾನೇ ಪರಿಶೀಲಿಸುವುದಿಲ್ಲ ? ರಾಧಿಕಾ ಒಬ್ಬ ನಟಿ. ಅಷ್ಟು ಮೊತ್ತ ಹಣ ಬ್ಯಾಂಕ್ ಖಾತೆಗೆ ಬಂದಾಗ ಯಾಕೆ ಪರಿಶೀಲಿಸಿಲ್ಲ ಎಂಬ ಪ್ರಶ್ನೆ ಉದ್ಭವಿಸಿದೆ.

ಇನ್ನು ಸ್ವಾಮಿ ಬಂಧನವಾದ ಕೂಡಲೇ ಅವರ ಖಾತೆಯಿಂದ ಹಣ ಬಂದಿರುವ ಬಗ್ಗೆ ರಾಧಿಕಾ ಮೊದಲೇ ಸಿಸಿಬಿ ಪೊಲೀಸರಿಗೆ ನೀಡಬಹುದಿತ್ತಾದರೂ ಇಷ್ಡು ದಿನ ಯಾಕೆ ಸುಮ್ಮನಿದ್ದರು ಎಂಬ ಪ್ರಶ್ನೆ ಕಾಡುತ್ತಿದೆ. ಇನ್ನು ವಿಚಾರಣೆ ವೇಳೆ ರಾಧಿಕಾ ನೀಡುವ ಹೇಳಿಕೆಯನ್ನು ಪೊಲೀಸರು ಗುಪ್ತವಾಗಿ ಇಟ್ಟುಕೊಳ್ಳಲಿದ್ದಾರೆ. ರಾಧಿಕಾ ಅವರ ಖಾತೆಗೆ ಹಣ ವರ್ಗಾವಣೆ ಮಾಡಿದ ಬಗ್ಗೆ ಸ್ವಾಮಿಯನ್ನು ವಿಚಾರಣೆ ನಡೆಸಲಿದ್ದಾರೆ. ಇಬ್ಬರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡು ಬಂದರೆ ರಾಧಿಕಾ ಕುಮಾರಸ್ವಾಮಿಗೆ ಸಂಕಷ್ಡ ಎದುರಾಗಲಿದೆ.
The CCB Police issue notice to Kannada Actress cum producer Radhika Kumaraswamy over raud case of receiving Rs 1.25 crore from S. Yuvaraj Swamy Yadav.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm