ಬ್ರೇಕಿಂಗ್ ನ್ಯೂಸ್
08-01-21 11:38 am Headline Karnataka News Network ಕರ್ನಾಟಕ
ಬೆಂಗಳೂರು, ಜ.8: ಗೋಹತ್ಯೆ ಕಾನೂನಿನ ವಿಚಾರದಲ್ಲಿ ಆಕ್ರೋಶ ವ್ಯಕ್ತಪಡಿಸಿ, ನಾನು ತಿಂತೀನಿ, ನೀನ್ಯಾವನಯ್ಯಾ ಕೇಳೋಕೆ ಎಂದು ಪ್ರಶ್ನೆ ಮಾಡಿ ವಿವಾದಕ್ಕೀಡಾಗಿದ್ದ ಸಿದ್ದರಾಮಯ್ಯ ಈಗ ಉಲ್ಟಾ ಹೊಡೆದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ'' ಎಂದಿದ್ದಾರೆ. ಅಲ್ಲದೆ, ''ನಾನು ಈವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಹಳ್ಳಿಯಿಂದ ಬಂದವನು, ಮಾತು ಸ್ವಲ್ಪ ಒರಟು, ಹಳ್ಳಿಭಾಷೆಯಲ್ಲಿ ಮಾತಾಡ್ತೇನೆ. ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ. ನಾ ಒಬ್ಬನೇ ಸಿಕ್ಕವನು ಟೀಕೆ ಮಾಡೋಕೆ. ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆಯೇ ಬೀಳುತ್ತಿದ್ದಾರೆ, ನನ್ನ ರಕ್ಷಣೆಗೆ ಜನರೇ ಬರಬೇಕು ಎಂದು ಗೋಗರೆದಿದ್ದಾರೆ.
''ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?'' ಎಂದು ಪ್ರಶ್ನೆ ಮಾಡಿದ್ದಾರೆ.
''ಓಟು ಹಾಕಲು ಊರಿಗೆ ಹೋಗಿದ್ದಾಗ ಕಾರ್ಯಕರ್ತರ ಮನೆಗೆ ಊಟಕ್ಕೆ ಹೋಗಿದ್ದೆ. ಅಲ್ಲಿ ಕೋಳಿ ಮಾಡಿದ್ದರು. ನಮ್ಮೂರ ಯುವಕನೊಬ್ಬ ಇಂದು ಹನುಮಜಯಂತಿ ಮಾಂಸ ತಿನ್ನೋದಿಲ್ಲ ಎಂದು ಹೇಳಿದಾಗ, ಹನುಮ ಜಯಂತಿ ದಿನ ಕೆಲವು ಕಡೆ ಮರಿ ಹೊಡೆಯುತ್ತಾರೆ, ಮಾಂಸ ತಿಂದರೆ ತಪ್ಪೇನು ಎಂದು ಕೇಳಿದ್ದೆ. ಅದನ್ನೂ ಕೂಡಾ ವಿವಾದ ಮಾಡಿಬಿಟ್ಟರು'' ಎಂದು ಬೇಸರ ತೋಡಿಕೊಂಡಿದ್ದಾರೆ.
ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?
— Siddaramaiah (@siddaramaiah) January 7, 2021
2/3
Senior Congress leader and former Karnataka Chief Minister Siddaramaiah admitted that he doesn't eat cattle meat.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm