ಬ್ರೇಕಿಂಗ್ ನ್ಯೂಸ್
08-01-21 11:38 am Headline Karnataka News Network ಕರ್ನಾಟಕ
ಬೆಂಗಳೂರು, ಜ.8: ಗೋಹತ್ಯೆ ಕಾನೂನಿನ ವಿಚಾರದಲ್ಲಿ ಆಕ್ರೋಶ ವ್ಯಕ್ತಪಡಿಸಿ, ನಾನು ತಿಂತೀನಿ, ನೀನ್ಯಾವನಯ್ಯಾ ಕೇಳೋಕೆ ಎಂದು ಪ್ರಶ್ನೆ ಮಾಡಿ ವಿವಾದಕ್ಕೀಡಾಗಿದ್ದ ಸಿದ್ದರಾಮಯ್ಯ ಈಗ ಉಲ್ಟಾ ಹೊಡೆದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ'' ಎಂದಿದ್ದಾರೆ. ಅಲ್ಲದೆ, ''ನಾನು ಈವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಹಳ್ಳಿಯಿಂದ ಬಂದವನು, ಮಾತು ಸ್ವಲ್ಪ ಒರಟು, ಹಳ್ಳಿಭಾಷೆಯಲ್ಲಿ ಮಾತಾಡ್ತೇನೆ. ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ. ನಾ ಒಬ್ಬನೇ ಸಿಕ್ಕವನು ಟೀಕೆ ಮಾಡೋಕೆ. ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆಯೇ ಬೀಳುತ್ತಿದ್ದಾರೆ, ನನ್ನ ರಕ್ಷಣೆಗೆ ಜನರೇ ಬರಬೇಕು ಎಂದು ಗೋಗರೆದಿದ್ದಾರೆ.
''ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?'' ಎಂದು ಪ್ರಶ್ನೆ ಮಾಡಿದ್ದಾರೆ.
''ಓಟು ಹಾಕಲು ಊರಿಗೆ ಹೋಗಿದ್ದಾಗ ಕಾರ್ಯಕರ್ತರ ಮನೆಗೆ ಊಟಕ್ಕೆ ಹೋಗಿದ್ದೆ. ಅಲ್ಲಿ ಕೋಳಿ ಮಾಡಿದ್ದರು. ನಮ್ಮೂರ ಯುವಕನೊಬ್ಬ ಇಂದು ಹನುಮಜಯಂತಿ ಮಾಂಸ ತಿನ್ನೋದಿಲ್ಲ ಎಂದು ಹೇಳಿದಾಗ, ಹನುಮ ಜಯಂತಿ ದಿನ ಕೆಲವು ಕಡೆ ಮರಿ ಹೊಡೆಯುತ್ತಾರೆ, ಮಾಂಸ ತಿಂದರೆ ತಪ್ಪೇನು ಎಂದು ಕೇಳಿದ್ದೆ. ಅದನ್ನೂ ಕೂಡಾ ವಿವಾದ ಮಾಡಿಬಿಟ್ಟರು'' ಎಂದು ಬೇಸರ ತೋಡಿಕೊಂಡಿದ್ದಾರೆ.
ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?
— Siddaramaiah (@siddaramaiah) January 7, 2021
2/3
Senior Congress leader and former Karnataka Chief Minister Siddaramaiah admitted that he doesn't eat cattle meat.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm