ಬ್ರೇಕಿಂಗ್ ನ್ಯೂಸ್
08-01-21 11:38 am Headline Karnataka News Network ಕರ್ನಾಟಕ
ಬೆಂಗಳೂರು, ಜ.8: ಗೋಹತ್ಯೆ ಕಾನೂನಿನ ವಿಚಾರದಲ್ಲಿ ಆಕ್ರೋಶ ವ್ಯಕ್ತಪಡಿಸಿ, ನಾನು ತಿಂತೀನಿ, ನೀನ್ಯಾವನಯ್ಯಾ ಕೇಳೋಕೆ ಎಂದು ಪ್ರಶ್ನೆ ಮಾಡಿ ವಿವಾದಕ್ಕೀಡಾಗಿದ್ದ ಸಿದ್ದರಾಮಯ್ಯ ಈಗ ಉಲ್ಟಾ ಹೊಡೆದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ'' ಎಂದಿದ್ದಾರೆ. ಅಲ್ಲದೆ, ''ನಾನು ಈವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಹಳ್ಳಿಯಿಂದ ಬಂದವನು, ಮಾತು ಸ್ವಲ್ಪ ಒರಟು, ಹಳ್ಳಿಭಾಷೆಯಲ್ಲಿ ಮಾತಾಡ್ತೇನೆ. ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ. ನಾ ಒಬ್ಬನೇ ಸಿಕ್ಕವನು ಟೀಕೆ ಮಾಡೋಕೆ. ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆಯೇ ಬೀಳುತ್ತಿದ್ದಾರೆ, ನನ್ನ ರಕ್ಷಣೆಗೆ ಜನರೇ ಬರಬೇಕು ಎಂದು ಗೋಗರೆದಿದ್ದಾರೆ.
''ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?'' ಎಂದು ಪ್ರಶ್ನೆ ಮಾಡಿದ್ದಾರೆ.
''ಓಟು ಹಾಕಲು ಊರಿಗೆ ಹೋಗಿದ್ದಾಗ ಕಾರ್ಯಕರ್ತರ ಮನೆಗೆ ಊಟಕ್ಕೆ ಹೋಗಿದ್ದೆ. ಅಲ್ಲಿ ಕೋಳಿ ಮಾಡಿದ್ದರು. ನಮ್ಮೂರ ಯುವಕನೊಬ್ಬ ಇಂದು ಹನುಮಜಯಂತಿ ಮಾಂಸ ತಿನ್ನೋದಿಲ್ಲ ಎಂದು ಹೇಳಿದಾಗ, ಹನುಮ ಜಯಂತಿ ದಿನ ಕೆಲವು ಕಡೆ ಮರಿ ಹೊಡೆಯುತ್ತಾರೆ, ಮಾಂಸ ತಿಂದರೆ ತಪ್ಪೇನು ಎಂದು ಕೇಳಿದ್ದೆ. ಅದನ್ನೂ ಕೂಡಾ ವಿವಾದ ಮಾಡಿಬಿಟ್ಟರು'' ಎಂದು ಬೇಸರ ತೋಡಿಕೊಂಡಿದ್ದಾರೆ.
ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?
— Siddaramaiah (@siddaramaiah) January 7, 2021
2/3
Senior Congress leader and former Karnataka Chief Minister Siddaramaiah admitted that he doesn't eat cattle meat.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm