ಬ್ರೇಕಿಂಗ್ ನ್ಯೂಸ್
01-08-26 04:26 pm HK News Staffer ಕರ್ನಾಟಕ
ಬೆಂಗಳೂರು, ಆ. 1: ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶಾಲೆ ಹಾಗೂ ಪಿಯು ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟವನ್ನು ಸಂಪೂರ್ಣ ನಿಷೇಧಿಸಿದೆ. ಹೈ ಫ್ಯಾಟ್, ಹೈ ಶುಗರ್ ಹಾಗೂ ಹೈ ಸಾಲ್ಟ್ ಅಂಶಗಳಿರುವ ಆಹಾರ ಉತ್ಪನ್ನಗಳ ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದ್ದು, ನಿಯಮ ಉಲ್ಲಂಘಿಸುವ ಅಂಗಡಿಗಳ ವಿರುದ್ಧ 3 ಲಕ್ಷದವರೆಗೂ ದಂಡ ಹಾಗೂ ಪರವಾನಗಿ ರದ್ದುಗೊಳಿಸುವ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ನಡೆಸಿದ ವಿಶೇಷ ಪರಿಶೀಲನಾ ಅಭಿಯಾನದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಜುಲೈ ತಿಂಗಳಲ್ಲಿ ಅಧಿಕಾರಿಗಳು 134 ಶಾಲೆ ಹಾಗೂ ಕಾಲೇಜುಗಳಲ್ಲಿ ದಿಢೀರ್ ತಪಾಸಣೆ ನಡೆಸಿ, ಶಾಲಾ ಆವರಣ ಮತ್ತು ಸುತ್ತಮುತ್ತಲಿನ ಆಹಾರ ಮಳಿಗೆಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ, ನೈರ್ಮಲ್ಯ, ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಹಾಗೂ ಪರವಾನಗಿ ದಾಖಲೆಗಳನ್ನು ಪರಿಶೀಲಿಸಿದ್ದರು. ಪರಿಶೀಲನೆ ವೇಳೆ ಸಂಶಯಾಸ್ಪದ 53 ಆಹಾರ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಆಧರಿಸಿ ತಪ್ಪಿತಸ್ಥ ವ್ಯಾಪಾರಿಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ–2006ರಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಜುಲೈ 21ರಿಂದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಮಾರ್ಗಸೂಚಿಯಂತೆ ಈ ನಿಯಮ ಜಾರಿಯಲ್ಲಿದ್ದು, ಶಾಲೆ ಹಾಗೂ ಪಿಯು ಕಾಲೇಜುಗಳ ಕ್ಯಾಂಟೀನ್ಗಳಿಗೂ ಇದು ಅನ್ವಯವಾಗಲಿದೆ.
ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ಯು.ಟಿ. ಖಾದರ್, "ರೋಗ ಬಂದ ಬಳಿಕ ಚಿಕಿತ್ಸೆ ನೀಡುವುದಕ್ಕಿಂತ ಮೊದಲು ಅದನ್ನು ತಡೆಗಟ್ಟುವುದು ಮುಖ್ಯ. ಮಕ್ಕಳು ಏನು ತಿನ್ನುತ್ತಾರೆ ಎನ್ನುವುದೇ ಅವರ ಆರೋಗ್ಯವನ್ನು ನಿರ್ಧರಿಸುತ್ತದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುತ್ತಿದ್ದೇವೆ. ಹೈ ಫ್ಯಾಟ್, ಹೈ ಶುಗರ್ ಹಾಗೂ ಹೈ ಸಾಲ್ಟ್ ಅಂಶಗಳಿರುವ ಆಹಾರ ಪದಾರ್ಥಗಳ ಮಾರಾಟವನ್ನು ಸಹಿಸಲಾಗುವುದಿಲ್ಲ," ಎಂದು ಹೇಳಿದ್ದಾರೆ.
ಶಾಲಾ ಆಡಳಿತ ಮಂಡಳಿಗಳು ಆರೋಗ್ಯಕರ ಆಹಾರ ಪದ್ಧತಿ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತೆ ಸೂಚನೆ ನೀಡಲಾಗಿದ್ದು, ಆಹಾರ ವ್ಯಾಪಾರಿಗಳು ಹೊಸ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಪರಿಶೀಲನಾ ಅಭಿಯಾನ ಮುಂದುವರಿಯಲಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಯಾಕೆ ಈ ಆದೇಶ?
ಜುಲೈನಲ್ಲಿ ರಾಜ್ಯದ 134 ಶಾಲಾ- ಕಾಲೇಜುಗಳ ಕ್ಯಾಂಟೀನ್ ಗಳಲ್ಲಿ ನಡೆದ ಪರಿಶೀಲನ ವೇಳೆ ನೂರಕ್ಕೂ ಅಧಿಕ ಶಾಲೆಗಳಲ್ಲಿ ಬ್ರೆಡ್ ಪಾಸ್ತಾ ಹಾಗೂ ಸಂಸ್ಕರಿಸಿದ ಜಂಕ್ ಫುಡ್ ಮಾರಾಟವಾಗುತ್ತಿರುವುದು ಪತ್ತೆಯಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am