ಬ್ರೇಕಿಂಗ್ ನ್ಯೂಸ್
03-08-26 04:45 pm HK News Staffer ಕರ್ನಾಟಕ
ಬೆಂಗಳೂರು, ಆ. 3: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಾಂಗ್ರೆಸ್ನಲ್ಲಿ ಭಾರೀ ಅಸಮಾಧಾನಕ್ಕೆ ಕಾರಣವಾಗಿದ್ದು, ಸಚಿವ ಸ್ಥಾನ ಕೈತಪ್ಪಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗವಾಗಿ ಬಂಡಾಯದ ಧ್ವನಿ ಎತ್ತಿದ್ದಾರೆ. "ನಾಳೆ ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಘೋಷಿಸುವ ಮೂಲಕ ಕಾಂಗ್ರೆಸ್ಗೆ ಹೊಸ ತಲೆನೋವು ತಂದಿದ್ದಾರೆ. ಸಚಿವ ಸಂಪುಟ ವಿಸ್ತರಣೆಯನ್ನು "ಮೋಸ" ಎಂದು ಕರೆದಿರುವ ಅವರು, ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಚಿವ ಸ್ಥಾನ ಹಂಚಿಕೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೇಳೂರು ಗೋಪಾಲಕೃಷ್ಣ, "ಗಾಡ್ಫಾದರ್ ಇರುವವರಿಗೆ, ಪ್ರಭಾವಿಗಳಿಗೆ ಮಾತ್ರ ಸಚಿವ ಸ್ಥಾನ ಸಿಗುತ್ತಾ? ನಿನ್ನೆಯವರೆಗೂ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಕೊನೆಯ ಕ್ಷಣದಲ್ಲಿ ಏಕಾಏಕಿ ಕೈಬಿಟ್ಟಿದ್ದಾರೆ. ನನಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ಸಂಪೂರ್ಣ ವಿಶ್ವಾಸ ಇತ್ತು. ಆದರೆ ಉದ್ದೇಶಪೂರ್ವಕವಾಗಿ ನನ್ನನ್ನು ಕಡೆಗಣಿಸಲಾಗಿದೆ" ಎಂದು ಆರೋಪಿಸಿದರು.
"ಈಗಾಗಲೇ ಎರಡು ಬಾರಿ ಸಚಿವರಾಗಿದ್ದವರಿಗೆ ಮತ್ತೆ ಅವಕಾಶ ಕೊಡಲಾಗಿದೆ. ಪ್ರಭಾವಿಗಳು, ಮಾಜಿ ಸಚಿವರು, ಮುಖ್ಯಮಂತ್ರಿಗಳ ಮಕ್ಕಳಿಗೆ ಮಾತ್ರ ಸಚಿವ ಸ್ಥಾನನಾ? ತಮಗೆ ಬೇಕಾದವರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಇದು ನಮ್ಮಂತಹ ನಿಷ್ಠಾವಂತ ಶಾಸಕರಿಗೆ ಮಾಡಿದ ಅನ್ಯಾಯ" ಎಂದು ಅವರು ಕಿಡಿಕಾರಿದರು.
ಸಚಿವ ಸಂಪುಟ ವಿಸ್ತರಣೆಯನ್ನು ನೇರವಾಗಿ "ಮೋಸ" ಎಂದು ಬಣ್ಣಿಸಿದ ಅವರು, "ಈ ಅನ್ಯಾಯವನ್ನು ಸಹಿಸಿಕೊಂಡು ಮುಂದುವರಿಯಲು ನನ್ನಿಂದ ಸಾಧ್ಯವಿಲ್ಲ. ಆದ್ದರಿಂದ ನಾಳೆ ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಘೋಷಿಸಿದರು.
ಇದೇ ವೇಳೆ, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮಂಕಾಳ್ ವೈದ್ಯರನ್ನು ನಡೆಸಿಕೊಂಡ ರೀತಿಯ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದೊಳಗಿನ ಬೆಳವಣಿಗೆಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಹೇಳಿದರು.
"ಕಾಂಗ್ರೆಸ್ನ ಹಲವಾರು ಅಸಮಾಧಾನಿತ ಶಾಸಕರು ಈಗಾಗಲೇ ನನ್ನ ಸಂಪರ್ಕದಲ್ಲಿದ್ದಾರೆ. ನಾಳೆ ಎಲ್ಲರೂ ಸೇರಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ" ಎಂದು ಹೇಳುವ ಮೂಲಕ ಪಕ್ಷದೊಳಗೆ ಮತ್ತಷ್ಟು ಅಸಮಾಧಾನ ಭುಗಿಲೇಳುವ ಸೂಚನೆ ನೀಡಿದರು.
"ನನಗೆ ಅನ್ಯಾಯವಾಗಿದೆ. ಸಂಪುಟ ವಿಸ್ತರಣೆ ಹೆಸರಲ್ಲಿ ಮತ್ತದೇ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ತಮಗೆ ಬೇಕಾದವರನ್ನು ಸಂಪುಟದಲ್ಲಿ ಸೇರಿಕೊಳ್ಳಲಾಗಿದ್ದು, ನಮ್ಮನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ. ಇದನ್ನು ಸಹಿಸಿಕೊಂಡಿರಲು ನನ್ನಿಂದ ಸಾಧ್ಯವಿಲ್ಲ. ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಬೇಳೂರು ಗೋಪಾಲಕೃಷ್ಣ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ್ದಾರೆ.
ಒಟ್ಟು 20 ಶಾಸಕರು ಇಂದು ಸಂಜೆ 4.05ಕ್ಕೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಬೆನ್ನಲ್ಲೇ, ಸಚಿವ ಸ್ಥಾನ ನಿರೀಕ್ಷಿಸಿದ್ದ ಹಲವು ಕಾಂಗ್ರೆಸ್ ಶಾಸಕರ ಅಸಮಾಧಾನ ಬಹಿರಂಗವಾಗಿದೆ. ಅದರಲ್ಲೂ ಬೇಳೂರು ಗೋಪಾಲಕೃಷ್ಣ ಅವರ ರಾಜೀನಾಮೆ ಘೋಷಣೆ ಕಾಂಗ್ರೆಸ್ ಸರ್ಕಾರಕ್ಕೆ ರಾಜಕೀಯವಾಗಿ ಹೊಸ ಸಂಕಷ್ಟ ಸೃಷ್ಟಿಸುವ ಸಾಧ್ಯತೆ ಇದೆ.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm