ಬ್ರೇಕಿಂಗ್ ನ್ಯೂಸ್
03-08-26 04:45 pm HK News Staffer ಕರ್ನಾಟಕ
ಬೆಂಗಳೂರು, ಆ. 3: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಾಂಗ್ರೆಸ್ನಲ್ಲಿ ಭಾರೀ ಅಸಮಾಧಾನಕ್ಕೆ ಕಾರಣವಾಗಿದ್ದು, ಸಚಿವ ಸ್ಥಾನ ಕೈತಪ್ಪಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗವಾಗಿ ಬಂಡಾಯದ ಧ್ವನಿ ಎತ್ತಿದ್ದಾರೆ. "ನಾಳೆ ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಘೋಷಿಸುವ ಮೂಲಕ ಕಾಂಗ್ರೆಸ್ಗೆ ಹೊಸ ತಲೆನೋವು ತಂದಿದ್ದಾರೆ. ಸಚಿವ ಸಂಪುಟ ವಿಸ್ತರಣೆಯನ್ನು "ಮೋಸ" ಎಂದು ಕರೆದಿರುವ ಅವರು, ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಚಿವ ಸ್ಥಾನ ಹಂಚಿಕೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೇಳೂರು ಗೋಪಾಲಕೃಷ್ಣ, "ಗಾಡ್ಫಾದರ್ ಇರುವವರಿಗೆ, ಪ್ರಭಾವಿಗಳಿಗೆ ಮಾತ್ರ ಸಚಿವ ಸ್ಥಾನ ಸಿಗುತ್ತಾ? ನಿನ್ನೆಯವರೆಗೂ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಕೊನೆಯ ಕ್ಷಣದಲ್ಲಿ ಏಕಾಏಕಿ ಕೈಬಿಟ್ಟಿದ್ದಾರೆ. ನನಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ಸಂಪೂರ್ಣ ವಿಶ್ವಾಸ ಇತ್ತು. ಆದರೆ ಉದ್ದೇಶಪೂರ್ವಕವಾಗಿ ನನ್ನನ್ನು ಕಡೆಗಣಿಸಲಾಗಿದೆ" ಎಂದು ಆರೋಪಿಸಿದರು.
"ಈಗಾಗಲೇ ಎರಡು ಬಾರಿ ಸಚಿವರಾಗಿದ್ದವರಿಗೆ ಮತ್ತೆ ಅವಕಾಶ ಕೊಡಲಾಗಿದೆ. ಪ್ರಭಾವಿಗಳು, ಮಾಜಿ ಸಚಿವರು, ಮುಖ್ಯಮಂತ್ರಿಗಳ ಮಕ್ಕಳಿಗೆ ಮಾತ್ರ ಸಚಿವ ಸ್ಥಾನನಾ? ತಮಗೆ ಬೇಕಾದವರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಇದು ನಮ್ಮಂತಹ ನಿಷ್ಠಾವಂತ ಶಾಸಕರಿಗೆ ಮಾಡಿದ ಅನ್ಯಾಯ" ಎಂದು ಅವರು ಕಿಡಿಕಾರಿದರು.
ಸಚಿವ ಸಂಪುಟ ವಿಸ್ತರಣೆಯನ್ನು ನೇರವಾಗಿ "ಮೋಸ" ಎಂದು ಬಣ್ಣಿಸಿದ ಅವರು, "ಈ ಅನ್ಯಾಯವನ್ನು ಸಹಿಸಿಕೊಂಡು ಮುಂದುವರಿಯಲು ನನ್ನಿಂದ ಸಾಧ್ಯವಿಲ್ಲ. ಆದ್ದರಿಂದ ನಾಳೆ ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಘೋಷಿಸಿದರು.
ಇದೇ ವೇಳೆ, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮಂಕಾಳ್ ವೈದ್ಯರನ್ನು ನಡೆಸಿಕೊಂಡ ರೀತಿಯ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದೊಳಗಿನ ಬೆಳವಣಿಗೆಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಹೇಳಿದರು.
"ಕಾಂಗ್ರೆಸ್ನ ಹಲವಾರು ಅಸಮಾಧಾನಿತ ಶಾಸಕರು ಈಗಾಗಲೇ ನನ್ನ ಸಂಪರ್ಕದಲ್ಲಿದ್ದಾರೆ. ನಾಳೆ ಎಲ್ಲರೂ ಸೇರಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ" ಎಂದು ಹೇಳುವ ಮೂಲಕ ಪಕ್ಷದೊಳಗೆ ಮತ್ತಷ್ಟು ಅಸಮಾಧಾನ ಭುಗಿಲೇಳುವ ಸೂಚನೆ ನೀಡಿದರು.
"ನನಗೆ ಅನ್ಯಾಯವಾಗಿದೆ. ಸಂಪುಟ ವಿಸ್ತರಣೆ ಹೆಸರಲ್ಲಿ ಮತ್ತದೇ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ತಮಗೆ ಬೇಕಾದವರನ್ನು ಸಂಪುಟದಲ್ಲಿ ಸೇರಿಕೊಳ್ಳಲಾಗಿದ್ದು, ನಮ್ಮನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ. ಇದನ್ನು ಸಹಿಸಿಕೊಂಡಿರಲು ನನ್ನಿಂದ ಸಾಧ್ಯವಿಲ್ಲ. ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಬೇಳೂರು ಗೋಪಾಲಕೃಷ್ಣ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ್ದಾರೆ.
ಒಟ್ಟು 20 ಶಾಸಕರು ಇಂದು ಸಂಜೆ 4.05ಕ್ಕೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಬೆನ್ನಲ್ಲೇ, ಸಚಿವ ಸ್ಥಾನ ನಿರೀಕ್ಷಿಸಿದ್ದ ಹಲವು ಕಾಂಗ್ರೆಸ್ ಶಾಸಕರ ಅಸಮಾಧಾನ ಬಹಿರಂಗವಾಗಿದೆ. ಅದರಲ್ಲೂ ಬೇಳೂರು ಗೋಪಾಲಕೃಷ್ಣ ಅವರ ರಾಜೀನಾಮೆ ಘೋಷಣೆ ಕಾಂಗ್ರೆಸ್ ಸರ್ಕಾರಕ್ಕೆ ರಾಜಕೀಯವಾಗಿ ಹೊಸ ಸಂಕಷ್ಟ ಸೃಷ್ಟಿಸುವ ಸಾಧ್ಯತೆ ಇದೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm