ಬ್ರೇಕಿಂಗ್ ನ್ಯೂಸ್
06-08-26 02:19 pm HK News Staffer ಕರ್ನಾಟಕ
ಕಲಬುರಗಿ, ಆ. 6: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯಲ್ಲಿ ಸುಮಾರು 5.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಎದುರಾಗಿದ್ದು, ಮುಂದಿನ ಚುನಾವಣೆಗಳ ಮೇಲೆ ಇದರ ಪರಿಣಾಮ ಏನಾಗಬಹುದು ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.
ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿ 2026ರ ಜೂನ್ 16ರ ವೇಳೆಗೆ ಒಟ್ಟು 23,71,542 ನೋಂದಾಯಿತ ಮತದಾರರು ಇದ್ದರು. ಇದೀಗ ಎಸ್ಐಆರ್ ಪ್ರಕ್ರಿಯೆಯ ಭಾಗವಾಗಿ ನಡೆದ ಡಿಜಿಟೈಸೇಷನ್ನಲ್ಲಿ 'ಯೂನಿಫೈಡ್ ಎಲೆಕ್ಟೋರಲ್ ರೋಲ್ ಫಾರ್ಮ್ಯಾಟ್' ಅಡಿಯಲ್ಲಿ ಗುರುತಿಸಲಾದ 5,36,179 ಮತದಾರರನ್ನು ‘ಮಿಸ್ಸಿಂಗ್’ ವರ್ಗದಲ್ಲಿ ಸೇರಿಸಲಾಗಿದೆ.
ಈ ಸಂಖ್ಯೆ ಒಟ್ಟು ಮತದಾರರ ಪೈಕಿ ಸುಮಾರು ಶೇ.22ರಷ್ಟಾಗಿದೆ. ಅಂದರೆ ಜಿಲ್ಲೆಯ ಪ್ರತಿ ನಾಲ್ಕರಿಂದ ಐದು ಮತದಾರರಲ್ಲಿ ಒಬ್ಬರ ಹೆಸರು ಅಂತಿಮ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ.
18.35 ಲಕ್ಷ ಮತದಾರರ ಮಾಹಿತಿ ಡಿಜಿಟಲೀಕರಣ;
ಎಸ್ಐಆರ್ ಪ್ರಕ್ರಿಯೆಯಲ್ಲಿ ಇದುವರೆಗೆ 18,35,363 ಮತದಾರರಿಂದ ಎನ್ಯುಮರೇಷನ್ ಫಾರಂ ಪಡೆದು ಡಿಜಿಟೈಸೇಷನ್ ಪೂರ್ಣಗೊಳಿಸಲಾಗಿದೆ. ಆದರೆ 5.36 ಲಕ್ಷ ಮತದಾರರ ಮಾಹಿತಿ ಪತ್ತೆಯಾಗದಿರುವುದು ಅಧಿಕಾರಿಗಳಿಗೆ ಸವಾಲಾಗಿದೆ.
ಜಿಲ್ಲೆಯ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಹೆಸರು ಕೈಬಿಡುವ ಪ್ರಮಾಣ ಹೆಚ್ಚಾಗಿದೆ.
ಗುಲ್ಬರ್ಗ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ:
ಒಟ್ಟು ಮತದಾರರು: 2,97,785 | ಮಿಸ್ಸಿಂಗ್: 1,07,718 | ಪ್ರಮಾಣ: ಶೇ.36.17
ಗುಲ್ಬರ್ಗ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ:
ಒಟ್ಟು ಮತದಾರರು: 3,35,254 | ಮಿಸ್ಸಿಂಗ್ ಮತದಾರರು: 1,10,349 | ಪ್ರಮಾಣ: ಶೇ.32.92
ಈ ಎರಡೂ ಕ್ಷೇತ್ರಗಳಲ್ಲೇ ಜಿಲ್ಲೆಯ ಒಟ್ಟು ‘ಮಿಸ್ಸಿಂಗ್’ ಮತದಾರರ ಪೈಕಿ ಸುಮಾರು ಶೇ.40ರಷ್ಟು ಪ್ರಮಾಣ ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಕೆಲ ಅಧಿಕಾರಿಗಳ ಪ್ರಕಾರ, ಗ್ರಾಮೀಣ ಪ್ರದೇಶದ ಹಲವು ಜನರು ತಮ್ಮ ಮೂಲ ಗ್ರಾಮಗಳಲ್ಲೇ ಮತದಾರರಾಗಿ ಉಳಿಸಿಕೊಂಡಿರುವುದು ಹಾಗೂ ಬೇರೆಡೆ ವಾಸವಾಗಿರುವುದು ಈ ಸಮಸ್ಯೆಗೆ ಪ್ರಮುಖ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.
ಹೆಸರು ಪರಿಶೀಲಿಸುವಂತೆ ಅಧಿಕಾರಿಗಳ ಮನವಿ;
ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಪ್ರತಿಯೊಬ್ಬ ನಿವಾಸಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ತಕ್ಷಣ ಪರಿಶೀಲಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಅಲ್ಲದೆ, ನೀಡಲಾಗಿರುವ ಎನ್ಯುಮರೇಷನ್ ಫಾರಂ ಅನ್ನು ಭರ್ತಿ ಮಾಡಿ ಎರಡು ದಿನಗಳೊಳಗೆ ಸಮೀಪದ ಬಿಎಲ್ಒ ಅವರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಮತದಾರರ ಪಟ್ಟಿಯ ಅಂತಿಮ ಪರಿಷ್ಕರಣೆಗೂ ಮುನ್ನ 5.36 ಲಕ್ಷ ಮತದಾರರ ಹೆಸರುಗಳ ವಿಚಾರ ಇದೀಗ ಜಿಲ್ಲೆಯಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm