ಬ್ರೇಕಿಂಗ್ ನ್ಯೂಸ್
14-08-26 08:42 pm HK News Staffer ಕರ್ನಾಟಕ
ಬೆಂಗಳೂರು, ಆ.14: ಖಾತೆ ಹಂಚಿಕೆಯಲ್ಲಿ ಡೌನ್ ಗ್ರೇಡ್ ಆಗಿರುವ ಜಮೀರ್ ಅಹ್ಮದ್ ಖಾನ್ ಅವರು ತನಗೆ ವಿಜಯನಗರ ಜಿಲ್ಲೆ ಸೇರಿದಂತೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಬೇಡ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಗೆ ಧ್ವಜಾರೋಹಣ ನಡೆಸಲು ವಿಜಯನಗರ ಜಲ್ಲೆಗೆ ಜಮೀರ್ ಅವರಿಗೆ ಹೊಣೆ ನೀಡಲಾಗಿತ್ತು.
ಅಮೂಲಕ ಪರೋಕ್ಷವಾಗಿ ಉಸ್ತುವಾರಿ ಜಿಲ್ಲೆ ವಿಜಯನಗರ ಎನ್ನುವುದನ್ನು ಜಮೀರ್ ಅವರಿಗೆ ಸೂಚಿಸಲಾಗಿತ್ತು. ಈ ಹಿಂದೆ ಇದ್ದ ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯನ್ನು ಕಿತ್ತು ಯುಟಿ ಖಾದರ್ ಗೆ ವಹಿಸಿದ್ದಲ್ಲದೆ, ಜಮೀರ್ ಗೆ ಕೇವಲ ವಸತಿ ಖಾತೆಯನ್ನು ಮಾತ್ರ ನೀಡಲಾಗಿತ್ತು. ಇದರಿಂದ ತೀವ್ರ ಅಸಮಾಧಾನಗೊಂಡ ಜಮೀರ್ ಪಕ್ಷದ ಕೆಲಸ ಹಿನ್ನೆಲೆಯಲ್ಲಿ ಉಸ್ತುವಾರಿಯೇ ಬೇಡವೆಂದು ಪತ್ರ ಬರೆದು ಬೇಸರ ತೋರಿಸಿದ್ದಾರೆ.
ಬಿಬಿಎಂಪಿ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿಧಾನಸಭಾ ಉಪ ಚುನಾವಣೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಸಮಯ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ತನಗೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡದಂತೆ ಜಮೀರ್ ಮನವಿ ಮಾಡಿದ್ದಾರೆ. ಈ ಹಿಂದೆ ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಅಧ್ಯಯನ ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನು ತಮಗೆ ನೀಡಲಾಗಿತ್ತು. ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
ಚುನಾವಣೆಗಳ ನೆಪದಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳಿಂದ ಹಿಂದೆ ಸರಿಯುವ ಸಚಿವರ ನಿರ್ಧಾರ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಯ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಜಮೀರ್ ಅವರ ಪತ್ರ ಮಹತ್ವ ಪಡೆದುಕೊಂಡಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm