ಬ್ರೇಕಿಂಗ್ ನ್ಯೂಸ್
14-08-26 08:42 pm HK News Staffer ಕರ್ನಾಟಕ
ಬೆಂಗಳೂರು, ಆ.14: ಖಾತೆ ಹಂಚಿಕೆಯಲ್ಲಿ ಡೌನ್ ಗ್ರೇಡ್ ಆಗಿರುವ ಜಮೀರ್ ಅಹ್ಮದ್ ಖಾನ್ ಅವರು ತನಗೆ ವಿಜಯನಗರ ಜಿಲ್ಲೆ ಸೇರಿದಂತೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಬೇಡ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಗೆ ಧ್ವಜಾರೋಹಣ ನಡೆಸಲು ವಿಜಯನಗರ ಜಲ್ಲೆಗೆ ಜಮೀರ್ ಅವರಿಗೆ ಹೊಣೆ ನೀಡಲಾಗಿತ್ತು.
ಅಮೂಲಕ ಪರೋಕ್ಷವಾಗಿ ಉಸ್ತುವಾರಿ ಜಿಲ್ಲೆ ವಿಜಯನಗರ ಎನ್ನುವುದನ್ನು ಜಮೀರ್ ಅವರಿಗೆ ಸೂಚಿಸಲಾಗಿತ್ತು. ಈ ಹಿಂದೆ ಇದ್ದ ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯನ್ನು ಕಿತ್ತು ಯುಟಿ ಖಾದರ್ ಗೆ ವಹಿಸಿದ್ದಲ್ಲದೆ, ಜಮೀರ್ ಗೆ ಕೇವಲ ವಸತಿ ಖಾತೆಯನ್ನು ಮಾತ್ರ ನೀಡಲಾಗಿತ್ತು. ಇದರಿಂದ ತೀವ್ರ ಅಸಮಾಧಾನಗೊಂಡ ಜಮೀರ್ ಪಕ್ಷದ ಕೆಲಸ ಹಿನ್ನೆಲೆಯಲ್ಲಿ ಉಸ್ತುವಾರಿಯೇ ಬೇಡವೆಂದು ಪತ್ರ ಬರೆದು ಬೇಸರ ತೋರಿಸಿದ್ದಾರೆ.
ಬಿಬಿಎಂಪಿ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿಧಾನಸಭಾ ಉಪ ಚುನಾವಣೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಸಮಯ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ತನಗೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡದಂತೆ ಜಮೀರ್ ಮನವಿ ಮಾಡಿದ್ದಾರೆ. ಈ ಹಿಂದೆ ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಅಧ್ಯಯನ ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನು ತಮಗೆ ನೀಡಲಾಗಿತ್ತು. ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
ಚುನಾವಣೆಗಳ ನೆಪದಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳಿಂದ ಹಿಂದೆ ಸರಿಯುವ ಸಚಿವರ ನಿರ್ಧಾರ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಯ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಜಮೀರ್ ಅವರ ಪತ್ರ ಮಹತ್ವ ಪಡೆದುಕೊಂಡಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm