ಬ್ರೇಕಿಂಗ್ ನ್ಯೂಸ್
24-08-26 03:16 pm HK News Staffer ಕರ್ನಾಟಕ
ಬೆಂಗಳೂರು , ಆ.24: ರಾಜ್ಯದಲ್ಲಿ H1N1 ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ವರ್ಷದ ಮೊದಲ ಎಂಟು ತಿಂಗಳಲ್ಲಿ ರಾಜ್ಯಾದ್ಯಂತ 4,212 ಪ್ರಯೋಗಾಲಯ ದೃಢೀಕೃತ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಸೇರಿದಂತೆ 15 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಆರೋಗ್ಯ ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಆರೋಗ್ಯ ವ್ಯವಸ್ಥೆಯನ್ನು ಸನ್ನದ್ಧವಾಗಿರಿಸಲಾಗಿದೆ. ಆಸ್ಪತ್ರೆಗಳಲ್ಲಿ ಅಗತ್ಯ ಬೆಡ್ಗಳು, ಔಷಧಿಗಳು ಹಾಗೂ ಮೂಲಸೌಕರ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಲಾಗಿದೆ.
ಇಂಟಿಗ್ರೇಟೆಡ್ ಹೆಲ್ತ್ ಇನ್ಫಾರ್ಮೇಷನ್ ಪ್ಲಾಟ್ಫಾರ್ಮ್ (IHIP) ಕಣ್ಗಾವಲು ವರದಿ ಪ್ರಕಾರ, ರಾಜ್ಯದ 32 ಜಿಲ್ಲೆಗಳಲ್ಲಿ 4,212 H1N1 ಪ್ರಕರಣಗಳು ದೃಢಪಟ್ಟಿವೆ. 2025ರಲ್ಲಿ 4,583 ಹಾಗೂ 2024ರಲ್ಲಿ 3,903 ಪ್ರಕರಣಗಳು ದಾಖಲಾಗಿದ್ದವು. ಸಾಮಾನ್ಯವಾಗಿ ಪ್ರತಿವರ್ಷ ಜನವರಿ–ಮಾರ್ಚ್ ಹಾಗೂ ಜುಲೈ–ಸೆಪ್ಟೆಂಬರ್ ಅವಧಿಯಲ್ಲಿ ಇನ್ಫ್ಲುಯೆಂಜಾ ಸೋಂಕು ಹೆಚ್ಚಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಸರ್ಕಾರದ ಸಿದ್ಧತೆ: ಆಸ್ಪತ್ರೆಗಳಲ್ಲಿ ಔಷಧಿ, ಮಾಸ್ಕ್ಗಳ ದಾಸ್ತಾನು
ILI ಹಾಗೂ SARI ಪ್ರಕರಣಗಳನ್ನು ಪತ್ತೆಹಚ್ಚಲು ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಕಣ್ಗಾವಲು ಕೇಂದ್ರಗಳನ್ನಾಗಿ ಮಾಡಲಾಗಿದೆ. ICMR-NCDC ಪ್ರಯೋಗಾಲಯಗಳು, ರಾಜ್ಯದ ವೈರಲ್ ಡಿಸೀಸ್ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿಗಳು (VRDL) ಹಾಗೂ ನಿಮ್ಹಾನ್ಸ್ ಮೂಲಕ ಮಾದರಿಗಳ ತ್ವರಿತ ಪರೀಕ್ಷೆಗೆ ಅಗತ್ಯ ಕಿಟ್ಗಳು ಮತ್ತು ಉಪಕರಣಗಳನ್ನು ಒದಗಿಸಲಾಗಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಜಿಲ್ಲಾಸ್ಪತ್ರೆಗಳವರೆಗೆ ಒಸೆಲ್ಟಾಮಿವಿರ್ ಮಾತ್ರೆಗಳು, N95 ಮಾಸ್ಕ್ಗಳು ಹಾಗೂ PPE ಕಿಟ್ಗಳನ್ನು ದಾಸ್ತಾನು ಮಾಡಲಾಗಿದೆ. ಸೋಂಕಿತರನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ವೈದ್ಯರು ಹಾಗೂ ಶುಶ್ರೂಷಾ ಸಿಬ್ಬಂದಿಗೆ ತರಬೇತಿಯನ್ನೂ ನೀಡಲಾಗಿದೆ.
H1N1 ತಡೆಗೆ ಈ ಮುನ್ನೆಚ್ಚರಿಕೆ ತಪ್ಪದೇ ಪಾಲಿಸಿ;
ಶಾಲೆಗಳಲ್ಲಿ ಆತಂಕ ಬೇಡ;
ಬೆಂಗಳೂರಿನ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ H1N1 ಸೋಂಕು ಹರಡಿದೆ ಎಂಬ ವದಂತಿಗಳನ್ನು ಆರೋಗ್ಯ ಸಚಿವರು ತಳ್ಳಿಹಾಕಿದ್ದಾರೆ. ಇಬ್ಬರು ಶಿಕ್ಷಕರಲ್ಲಿ ಮಾತ್ರ ಲಕ್ಷಣಗಳು ಕಂಡುಬಂದಿದ್ದು, ಯಾವುದೇ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಶಾಲಾ ಆವರಣಗಳಲ್ಲಿ ಸೋಂಕು ಹರಡುವುದನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಮಾರ್ಗಸೂಚಿ ನೀಡಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am