ಬ್ರೇಕಿಂಗ್ ನ್ಯೂಸ್
28-08-26 09:35 pm HK News Staffer ಕರ್ನಾಟಕ
ಬೆಂಗಳೂರು, ಆ.28: ಸಿನಿಮಾಗಳಲ್ಲಿ ಹಿಂಸಾಚಾರ, ಮಹಿಳೆಯರನ್ನು ಅಸಭ್ಯವಾಗಿ ಬಿಂಬಿಸುತ್ತಿರುವ ಕುರಿತಾಗಿ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡಿನ ಸ್ಟಾರ್ ರಾಜಕಾರಣಿ ಕೆ. ಅಣ್ಣಾಮಲೈ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ದೃಶ್ಯಗಳ ಬಗ್ಗೆ ಸೆನ್ಸಾರ್ ಮಂಡಳಿ (ಸಿಬಿಎಫ್ಸಿ) ತನ್ನ ಜವಾಬ್ದಾರಿಯನ್ನು ಇನ್ನಷ್ಟು ಕಠಿಣವಾಗಿ ನಿರ್ವಹಿಸಬೇಕಾಗಿದೆ ಎಂದು ಹೇಳಿದ್ದಾರೆ.
ನಟ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಹೆಸರನ್ನು ನೇರವಾಗಿ ಪ್ರಸ್ತಾಪಿಸದೇ ಚಿತ್ರದ ಸುತ್ತ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಅಣ್ಣಾಮಲೈ ಈ ಮಾತುಗಳನ್ನಾಡಿದ್ದಾರೆ. ಅಮೆರಿಕ ಮತ್ತು ಯುರೋಪ್ ದೇಶಗಳಲ್ಲಿ ವಯೋಮಿತಿಗೆ ತಕ್ಕಂತೆ ಸೆನ್ಸಾರ್ ನಿಯಮಗಳು ಎಷ್ಟೊಂದು ಬಿಗಿಯಾಗಿವೆ ಎಂಬುದನ್ನು ನಾವು ನೋಡಬಹುದು. ಆದರೆ ಭಾರತದಲ್ಲಿ 18 ವರ್ಷದೊಳಗಿನ ಮಕ್ಕಳಿಗೆ ಸೂಕ್ತವಲ್ಲದ ದೃಶ್ಯಗಳು ಅಡೆ ತಡೆಯಿಲ್ಲದೆ ಪ್ರದರ್ಶನಗೊಳ್ಳುತ್ತಿವೆ.
ಯಾವುದೇ ಚಿತ್ರವನ್ನು ಸಂಪೂರ್ಣ ನಿಷೇಧಿಸಿ ಎಂದು ಹೇಳುತ್ತಿಲ್ಲ. ಆದರೆ ಸರಿಯಾದ ರೀತಿಯಲ್ಲಿ ಸೆನ್ಸಾರ್ ಆಗಬೇಕು. ಪ್ರಮಾಣಪತ್ರ ನೀಡಿದ ನಂತರ ಚಿತ್ರಮಂದಿರಗಳಲ್ಲಿ ವಯಸ್ಸಿನ ಅಂತರವಿಲ್ಲದೆ ನೋಡುವಂತಿರಬೇಕು. ಮಲ್ಟಿಪ್ಲೆಕ್ಸ್ ಹೊರತುಪಡಿಸಿ, ಇತರೇ ಚಿತ್ರಮಂದಿರಗಳಲ್ಲಿ ಯಾರು ಬೇಕಾದರೂ ಒಳಗೆ ಹೋಗುವ ವಾತಾವರಣವಿದೆ. ಸ್ಟಾರ್ ನಟರು ನಟಿಸಿದ್ದಾರೆ ಎಂಬ ಕಾರಣಕ್ಕೆ ಎಲ್ಲವನ್ನೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇಂತಹ ಧೋರಣೆಯಿಂದ ವಿದ್ಯಾರ್ಥಿ, ಯುವ ಸಮುದಾಯ ದಾರಿ ತಪ್ಪುತ್ತಿದೆ.
ಒಂದೆಡೆ ನಾವು ಮಹಿಳಾ ಸಬಲೀಕರಣ, ದೌರ್ಜನ್ಯಗಳ ವಿರುದ್ಧ ಮಾತನಾಡುತ್ತೇವೆ. ಆದರೆ ಸಿನಿಮಾಗಳಲ್ಲಿ ಮಹಿಳೆಯನ್ನು ಕೇವಲ ಭೋಗದ ವಸ್ತುವಿನಂತೆ ಬಿಂಬಿಸಲಾಗುತ್ತಿದೆ. ಸಮಾಜದ ಮೇಲೆ ಅಗಾಧ ಪ್ರಭಾವ ಬೀರುವ ಶಕ್ತಿ ಚಿತ್ರರಂಗಕ್ಕಿದೆ. ಆದರೆ ಇತ್ತೀಚೆಗೆ ಬರುತ್ತಿರುವ ಕೆಲವು ಚಿತ್ರಗಳು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತಿವೆ," ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟಾಕ್ಸಿಕ್ ಚಿತ್ರದಲ್ಲಿ ಅತಿಯಾದ ಹಿಂಸೆ, ಅಶ್ಲೀಲತೆ ಕುರಿತು ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಅಣ್ಣಾಮಲೈ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm