ಬ್ರೇಕಿಂಗ್ ನ್ಯೂಸ್
29-08-26 10:49 pm HK News Staffer ಕರ್ನಾಟಕ
ಬೆಂಗಳೂರು, ಆ.29: ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಶೀಘ್ರದಲ್ಲೇ ಬಿಜೆಪಿ ಸಂಸದೀಯ ಮಂಡಳಿಯಿಂದ ಕೈಬಿಡುವ ಸಾಧ್ಯತೆ ಇದೆ.
ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಬಿಜೆಪಿಯ ಪರಮೋಚ್ಛ ನೀತಿರೂಪಕ ಸಂಸ್ಥೆಯಾದ ಸಂಸದೀಯ ಮಂಡಳಿಯಲ್ಲಿ ಅವರಿಗೆ ಸ್ಥಾನ ಕಲ್ಪಿಸಲಾಗಿತ್ತು. ಇದೀಗ ಬದಲಾದ ಸನ್ನಿವೇಶದಲ್ಲಿ ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ ಸರಣಿ ಬದಲಾವಣೆಗಳನ್ನು ತರುತ್ತಿದ್ದು, ಬಿಜೆಪಿ ಸಂಸದೀಯ ಮಂಡಳಿಯನ್ನು ಪರಿಷ್ಕರಣೆ ಮಾಡಲಿದ್ದಾರೆ. ಈ ವೇಳೆ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ಖಚಿತ ಎನ್ನಲಾಗುತ್ತಿದೆ.
ಈಗಾಗಲೇ ಕರ್ನಾಟಕದ ಎಂ. ನಾಗರಾಜ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಬಿ.ಎಲ್. ಸಂತೋಷ್ ಅವರು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿದಿದ್ದಾರೆ. ಈಗ ಇಡೀ ರಾಷ್ಟ್ರಕ್ಕೆ ಅನ್ವಯವಾಗುವಂತೆ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲು ಬಿಜೆಪಿ ಮುಂದಾಗಿದ್ದು, ಬಿಎಸ್ವೈ ಸೇರಿದಂತೆ ಕೆಲ ಹಿರಿಯರಿಗೆ ವಿಶ್ರಾಂತಿ ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ.
12 ಸದಸ್ಯರ ಸಂಸದೀಯ ಮಂಡಳಿಯು ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಟಿಕೆಟ್ ಹಂಚಿಕೆ ಸೇರಿದಂತೆ ಪಕ್ಷದ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುತ್ತದೆ. ಈ ಎಲ್ಲಾ ಪ್ರಮುಖ ಪ್ರಕ್ರಿಯೆಗಳಲ್ಲಿ ಯಡಿಯೂರಪ್ಪ ಅವರು ರಾಜ್ಯವನ್ನು ಪ್ರತಿನಿಧಿಸುತ್ತ ಬಂದಿದ್ದರು.
ಆದ್ರೆ ‘ಬದಲಾದ ರಾಜಕೀಯ ಪರಿಸ್ಥಿತಿಗೆ ತಕ್ಕಂತೆ ಹೊಸ ಚಿಂತನೆಗಳಿಗೆ ಅವಕಾಶ ಮಾಡಿಕೊಡಲು ಹೈಕಮಾಂಡ್ ನಿರ್ಧರಿಸಿದೆ. ಹಿರಿಯ ನಾಯಕ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಈಗಾಗಲೇ ಪರೋಕ್ಷ ಸಂದೇಶ ರವಾನೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದ್ದು, ಪಕ್ಷದ ಸಂಘಟನಾತ್ಮಕ ಸುಧಾರಣೆಯ ಭಾಗವಾಗಿ ನಡೆಯುತ್ತಿರುವ ಈ ಬದಲಾವಣೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm