ಬ್ರೇಕಿಂಗ್ ನ್ಯೂಸ್
09-01-21 01:03 pm Bangalore Correspondent ಕರ್ನಾಟಕ
ಬೆಂಗಳೂರು, ಜ.9: ಸಂಚಾರ ನಿಯಮ ಉಲ್ಲಂಘನೆ ಮಾಡುವ ಮಂದಿಯನ್ನ ರಸ್ತೆಯಲ್ಲಿ ತಡೆದು ದಂಡ ವಿಧಿಸುವ ಕ್ರಮಕ್ಕೆ ಬೆಂಗಳೂರು ಪೋಲಿಸರು ತಿಲಾಂಜಲಿ ಇಟ್ಟಿದ್ದಾರೆ.
ಇದರಿಂದ ನಡು ರಸ್ತೆಯಲ್ಲಿ ಬೈಕ್ ಸವಾರರಿಗೆ ಆಗುತ್ತಿದ್ದ ದೊಡ್ಡ ಕಿರಿಕಿರಿ ತಪ್ಪಿದೆ. ಹಾಗಂತ ಸಂಚಾರಿ ನಿಯಮ ಉಲ್ಲಂಘನೆ ಮಾಡಿ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ನಿಮ್ಮ ವಿರುದ್ಧ ಡಿಜಿಟಲ್ ಕೇಸ್ ದಾಖಲಾಗಲಿದ್ದು ನೀವು ಸಂಚಾರಿ ನಿಯಮ ಉಲ್ಲಂಘಿಸಿದರೆ ನಿಮ್ಮ ವಿಳಾಸಕ್ಕೆ ನೋಟಿಸ್ ಬರಲಿದೆ. ಇದಕ್ಕೆ ನೀವು ದಂಡವನ್ನೂ ಪಾವತಿಸಬೇಕಾಗುತ್ತದೆ.
ಬೆಂಗಳೂರು ಮಹಾನಗರದ ರಸ್ತೆಗಳ ಮಧ್ಯೆ ವಾಹನ ತಡೆಯುವುದರಿಂದ ಟ್ರಾಫಿಕ್ ಸಮಸ್ಯೆ ಆಗುವ ಕಾರಣ ಮಾರ್ಗ ಮಧ್ಯೆ ತಡೆದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಪೊಲೀಸ್ ಇಲಾಖೆಯಿಂದ ಸೂಚನೆ ಬಂದಿದೆ. ಬದಲಿಗೆ ಯಾರು ನಿಯಮ ಉಲ್ಲಂಘನೆ ಮಾಡುತ್ತಾರೋ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ಪೋಲಿಸ್ ಇಲಾಖೆ ಸೂಚನೆ ನೀಡಿದೆ.
ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ, ದಂಡ ವಿಧಿಸುವುದರ ಬಗ್ಗೆ ಸೊಶೀಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗಿತ್ತು. ಭಾರೀ ಟೀಕೆಯೂ ಸಾರ್ವಜನಿಕರ ಕಡೆಯಿಂದ ಕೇಳಿಬಂದಿತ್ತು. ಇದರ ಪರಿಣಾಮ ಎಂಬಂತೆ ಪೋಲಿಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.
ಇದರಂತೆ, ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನ ಯಾವುದೇ ಕಾನ್ಸ್ಟೇಬಲ್ ಅಡ್ಡಗಟ್ಟಿ ನಿಲ್ಲಿಸಬಾರದು. ಬದಲಿಗೆ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿ, ಬೈಕ್ ನಂಬರ್ ಎಂಟ್ರಿ ಮಾಡಿಕೊಂಡು ಕೇಸ್ ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಆದರೆ ದಿನಕ್ಕೆ ಕನಿಷ್ಟ 25 ಈ ರೀತಿಯ ಕೇಸ್ ದಾಖಲಿಸಬೇಕೆಂಬ ಟಾರ್ಗೆಟ್ ಅನ್ನು ಪೊಲೀಸರಿಗೆ ನೀಡಲಾಗಿದೆ.
ರಸ್ತೆಯಲ್ಲಿ ದಂಡ ವಿಧಿಸುವ ಬದಲು ಆರ್ಟಿಒ ಹಾಗೂ ವಾಯು ಮಾಲಿನ್ಯ ಪ್ರಮಾಣ ತಪಾಸಣೆಗೆ ಬರುವ ವಾಹನಗಳಿಗೆ ಹಳೇ ಕೇಸ್ ಇದ್ದರೆ ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ. ಹೀಗೆ ಡಿಜಿಟಲ್ ಪದ್ದತಿ ಜಾರಿಗೆ ಬಂದರೆ ಬಿಲ್ ಕೊಡದೆ ಹಣ ಪಡೆಯುವ ಕ್ರಮ ಕೂಡ ತಪ್ಪಲಿದೆ. ಪೊಲೀಸರಿಂದ ರಸ್ತೆ ಮಧ್ಯೆ ಹಣ ಪೀಕಿಸಿಕೊಳ್ಳುವ ಕಿರಿ ಕಿರಿಯನ್ನು ಬೈಕ್ ಸವಾರರು ತಪ್ಪಿಸಿಕೊಳ್ಳಲಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm