ಬ್ರೇಕಿಂಗ್ ನ್ಯೂಸ್
09-01-21 01:03 pm Bangalore Correspondent ಕರ್ನಾಟಕ
ಬೆಂಗಳೂರು, ಜ.9: ಸಂಚಾರ ನಿಯಮ ಉಲ್ಲಂಘನೆ ಮಾಡುವ ಮಂದಿಯನ್ನ ರಸ್ತೆಯಲ್ಲಿ ತಡೆದು ದಂಡ ವಿಧಿಸುವ ಕ್ರಮಕ್ಕೆ ಬೆಂಗಳೂರು ಪೋಲಿಸರು ತಿಲಾಂಜಲಿ ಇಟ್ಟಿದ್ದಾರೆ.
ಇದರಿಂದ ನಡು ರಸ್ತೆಯಲ್ಲಿ ಬೈಕ್ ಸವಾರರಿಗೆ ಆಗುತ್ತಿದ್ದ ದೊಡ್ಡ ಕಿರಿಕಿರಿ ತಪ್ಪಿದೆ. ಹಾಗಂತ ಸಂಚಾರಿ ನಿಯಮ ಉಲ್ಲಂಘನೆ ಮಾಡಿ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ನಿಮ್ಮ ವಿರುದ್ಧ ಡಿಜಿಟಲ್ ಕೇಸ್ ದಾಖಲಾಗಲಿದ್ದು ನೀವು ಸಂಚಾರಿ ನಿಯಮ ಉಲ್ಲಂಘಿಸಿದರೆ ನಿಮ್ಮ ವಿಳಾಸಕ್ಕೆ ನೋಟಿಸ್ ಬರಲಿದೆ. ಇದಕ್ಕೆ ನೀವು ದಂಡವನ್ನೂ ಪಾವತಿಸಬೇಕಾಗುತ್ತದೆ.

ಬೆಂಗಳೂರು ಮಹಾನಗರದ ರಸ್ತೆಗಳ ಮಧ್ಯೆ ವಾಹನ ತಡೆಯುವುದರಿಂದ ಟ್ರಾಫಿಕ್ ಸಮಸ್ಯೆ ಆಗುವ ಕಾರಣ ಮಾರ್ಗ ಮಧ್ಯೆ ತಡೆದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಪೊಲೀಸ್ ಇಲಾಖೆಯಿಂದ ಸೂಚನೆ ಬಂದಿದೆ. ಬದಲಿಗೆ ಯಾರು ನಿಯಮ ಉಲ್ಲಂಘನೆ ಮಾಡುತ್ತಾರೋ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ಪೋಲಿಸ್ ಇಲಾಖೆ ಸೂಚನೆ ನೀಡಿದೆ.
ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ, ದಂಡ ವಿಧಿಸುವುದರ ಬಗ್ಗೆ ಸೊಶೀಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗಿತ್ತು. ಭಾರೀ ಟೀಕೆಯೂ ಸಾರ್ವಜನಿಕರ ಕಡೆಯಿಂದ ಕೇಳಿಬಂದಿತ್ತು. ಇದರ ಪರಿಣಾಮ ಎಂಬಂತೆ ಪೋಲಿಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಇದರಂತೆ, ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನ ಯಾವುದೇ ಕಾನ್ಸ್ಟೇಬಲ್ ಅಡ್ಡಗಟ್ಟಿ ನಿಲ್ಲಿಸಬಾರದು. ಬದಲಿಗೆ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿ, ಬೈಕ್ ನಂಬರ್ ಎಂಟ್ರಿ ಮಾಡಿಕೊಂಡು ಕೇಸ್ ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಆದರೆ ದಿನಕ್ಕೆ ಕನಿಷ್ಟ 25 ಈ ರೀತಿಯ ಕೇಸ್ ದಾಖಲಿಸಬೇಕೆಂಬ ಟಾರ್ಗೆಟ್ ಅನ್ನು ಪೊಲೀಸರಿಗೆ ನೀಡಲಾಗಿದೆ.
ರಸ್ತೆಯಲ್ಲಿ ದಂಡ ವಿಧಿಸುವ ಬದಲು ಆರ್ಟಿಒ ಹಾಗೂ ವಾಯು ಮಾಲಿನ್ಯ ಪ್ರಮಾಣ ತಪಾಸಣೆಗೆ ಬರುವ ವಾಹನಗಳಿಗೆ ಹಳೇ ಕೇಸ್ ಇದ್ದರೆ ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ. ಹೀಗೆ ಡಿಜಿಟಲ್ ಪದ್ದತಿ ಜಾರಿಗೆ ಬಂದರೆ ಬಿಲ್ ಕೊಡದೆ ಹಣ ಪಡೆಯುವ ಕ್ರಮ ಕೂಡ ತಪ್ಪಲಿದೆ. ಪೊಲೀಸರಿಂದ ರಸ್ತೆ ಮಧ್ಯೆ ಹಣ ಪೀಕಿಸಿಕೊಳ್ಳುವ ಕಿರಿ ಕಿರಿಯನ್ನು ಬೈಕ್ ಸವಾರರು ತಪ್ಪಿಸಿಕೊಳ್ಳಲಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm