ಬ್ರೇಕಿಂಗ್ ನ್ಯೂಸ್
09-01-21 01:03 pm Bangalore Correspondent ಕರ್ನಾಟಕ
ಬೆಂಗಳೂರು, ಜ.9: ಸಂಚಾರ ನಿಯಮ ಉಲ್ಲಂಘನೆ ಮಾಡುವ ಮಂದಿಯನ್ನ ರಸ್ತೆಯಲ್ಲಿ ತಡೆದು ದಂಡ ವಿಧಿಸುವ ಕ್ರಮಕ್ಕೆ ಬೆಂಗಳೂರು ಪೋಲಿಸರು ತಿಲಾಂಜಲಿ ಇಟ್ಟಿದ್ದಾರೆ.
ಇದರಿಂದ ನಡು ರಸ್ತೆಯಲ್ಲಿ ಬೈಕ್ ಸವಾರರಿಗೆ ಆಗುತ್ತಿದ್ದ ದೊಡ್ಡ ಕಿರಿಕಿರಿ ತಪ್ಪಿದೆ. ಹಾಗಂತ ಸಂಚಾರಿ ನಿಯಮ ಉಲ್ಲಂಘನೆ ಮಾಡಿ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ನಿಮ್ಮ ವಿರುದ್ಧ ಡಿಜಿಟಲ್ ಕೇಸ್ ದಾಖಲಾಗಲಿದ್ದು ನೀವು ಸಂಚಾರಿ ನಿಯಮ ಉಲ್ಲಂಘಿಸಿದರೆ ನಿಮ್ಮ ವಿಳಾಸಕ್ಕೆ ನೋಟಿಸ್ ಬರಲಿದೆ. ಇದಕ್ಕೆ ನೀವು ದಂಡವನ್ನೂ ಪಾವತಿಸಬೇಕಾಗುತ್ತದೆ.

ಬೆಂಗಳೂರು ಮಹಾನಗರದ ರಸ್ತೆಗಳ ಮಧ್ಯೆ ವಾಹನ ತಡೆಯುವುದರಿಂದ ಟ್ರಾಫಿಕ್ ಸಮಸ್ಯೆ ಆಗುವ ಕಾರಣ ಮಾರ್ಗ ಮಧ್ಯೆ ತಡೆದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಪೊಲೀಸ್ ಇಲಾಖೆಯಿಂದ ಸೂಚನೆ ಬಂದಿದೆ. ಬದಲಿಗೆ ಯಾರು ನಿಯಮ ಉಲ್ಲಂಘನೆ ಮಾಡುತ್ತಾರೋ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ಪೋಲಿಸ್ ಇಲಾಖೆ ಸೂಚನೆ ನೀಡಿದೆ.
ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ, ದಂಡ ವಿಧಿಸುವುದರ ಬಗ್ಗೆ ಸೊಶೀಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗಿತ್ತು. ಭಾರೀ ಟೀಕೆಯೂ ಸಾರ್ವಜನಿಕರ ಕಡೆಯಿಂದ ಕೇಳಿಬಂದಿತ್ತು. ಇದರ ಪರಿಣಾಮ ಎಂಬಂತೆ ಪೋಲಿಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಇದರಂತೆ, ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನ ಯಾವುದೇ ಕಾನ್ಸ್ಟೇಬಲ್ ಅಡ್ಡಗಟ್ಟಿ ನಿಲ್ಲಿಸಬಾರದು. ಬದಲಿಗೆ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿ, ಬೈಕ್ ನಂಬರ್ ಎಂಟ್ರಿ ಮಾಡಿಕೊಂಡು ಕೇಸ್ ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಆದರೆ ದಿನಕ್ಕೆ ಕನಿಷ್ಟ 25 ಈ ರೀತಿಯ ಕೇಸ್ ದಾಖಲಿಸಬೇಕೆಂಬ ಟಾರ್ಗೆಟ್ ಅನ್ನು ಪೊಲೀಸರಿಗೆ ನೀಡಲಾಗಿದೆ.
ರಸ್ತೆಯಲ್ಲಿ ದಂಡ ವಿಧಿಸುವ ಬದಲು ಆರ್ಟಿಒ ಹಾಗೂ ವಾಯು ಮಾಲಿನ್ಯ ಪ್ರಮಾಣ ತಪಾಸಣೆಗೆ ಬರುವ ವಾಹನಗಳಿಗೆ ಹಳೇ ಕೇಸ್ ಇದ್ದರೆ ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ. ಹೀಗೆ ಡಿಜಿಟಲ್ ಪದ್ದತಿ ಜಾರಿಗೆ ಬಂದರೆ ಬಿಲ್ ಕೊಡದೆ ಹಣ ಪಡೆಯುವ ಕ್ರಮ ಕೂಡ ತಪ್ಪಲಿದೆ. ಪೊಲೀಸರಿಂದ ರಸ್ತೆ ಮಧ್ಯೆ ಹಣ ಪೀಕಿಸಿಕೊಳ್ಳುವ ಕಿರಿ ಕಿರಿಯನ್ನು ಬೈಕ್ ಸವಾರರು ತಪ್ಪಿಸಿಕೊಳ್ಳಲಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm