ಬ್ರೇಕಿಂಗ್ ನ್ಯೂಸ್
09-01-21 01:03 pm Bangalore Correspondent ಕರ್ನಾಟಕ
ಬೆಂಗಳೂರು, ಜ.9: ಸಂಚಾರ ನಿಯಮ ಉಲ್ಲಂಘನೆ ಮಾಡುವ ಮಂದಿಯನ್ನ ರಸ್ತೆಯಲ್ಲಿ ತಡೆದು ದಂಡ ವಿಧಿಸುವ ಕ್ರಮಕ್ಕೆ ಬೆಂಗಳೂರು ಪೋಲಿಸರು ತಿಲಾಂಜಲಿ ಇಟ್ಟಿದ್ದಾರೆ.
ಇದರಿಂದ ನಡು ರಸ್ತೆಯಲ್ಲಿ ಬೈಕ್ ಸವಾರರಿಗೆ ಆಗುತ್ತಿದ್ದ ದೊಡ್ಡ ಕಿರಿಕಿರಿ ತಪ್ಪಿದೆ. ಹಾಗಂತ ಸಂಚಾರಿ ನಿಯಮ ಉಲ್ಲಂಘನೆ ಮಾಡಿ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ನಿಮ್ಮ ವಿರುದ್ಧ ಡಿಜಿಟಲ್ ಕೇಸ್ ದಾಖಲಾಗಲಿದ್ದು ನೀವು ಸಂಚಾರಿ ನಿಯಮ ಉಲ್ಲಂಘಿಸಿದರೆ ನಿಮ್ಮ ವಿಳಾಸಕ್ಕೆ ನೋಟಿಸ್ ಬರಲಿದೆ. ಇದಕ್ಕೆ ನೀವು ದಂಡವನ್ನೂ ಪಾವತಿಸಬೇಕಾಗುತ್ತದೆ.

ಬೆಂಗಳೂರು ಮಹಾನಗರದ ರಸ್ತೆಗಳ ಮಧ್ಯೆ ವಾಹನ ತಡೆಯುವುದರಿಂದ ಟ್ರಾಫಿಕ್ ಸಮಸ್ಯೆ ಆಗುವ ಕಾರಣ ಮಾರ್ಗ ಮಧ್ಯೆ ತಡೆದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಪೊಲೀಸ್ ಇಲಾಖೆಯಿಂದ ಸೂಚನೆ ಬಂದಿದೆ. ಬದಲಿಗೆ ಯಾರು ನಿಯಮ ಉಲ್ಲಂಘನೆ ಮಾಡುತ್ತಾರೋ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ಪೋಲಿಸ್ ಇಲಾಖೆ ಸೂಚನೆ ನೀಡಿದೆ.
ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ, ದಂಡ ವಿಧಿಸುವುದರ ಬಗ್ಗೆ ಸೊಶೀಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗಿತ್ತು. ಭಾರೀ ಟೀಕೆಯೂ ಸಾರ್ವಜನಿಕರ ಕಡೆಯಿಂದ ಕೇಳಿಬಂದಿತ್ತು. ಇದರ ಪರಿಣಾಮ ಎಂಬಂತೆ ಪೋಲಿಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಇದರಂತೆ, ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನ ಯಾವುದೇ ಕಾನ್ಸ್ಟೇಬಲ್ ಅಡ್ಡಗಟ್ಟಿ ನಿಲ್ಲಿಸಬಾರದು. ಬದಲಿಗೆ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿ, ಬೈಕ್ ನಂಬರ್ ಎಂಟ್ರಿ ಮಾಡಿಕೊಂಡು ಕೇಸ್ ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಆದರೆ ದಿನಕ್ಕೆ ಕನಿಷ್ಟ 25 ಈ ರೀತಿಯ ಕೇಸ್ ದಾಖಲಿಸಬೇಕೆಂಬ ಟಾರ್ಗೆಟ್ ಅನ್ನು ಪೊಲೀಸರಿಗೆ ನೀಡಲಾಗಿದೆ.
ರಸ್ತೆಯಲ್ಲಿ ದಂಡ ವಿಧಿಸುವ ಬದಲು ಆರ್ಟಿಒ ಹಾಗೂ ವಾಯು ಮಾಲಿನ್ಯ ಪ್ರಮಾಣ ತಪಾಸಣೆಗೆ ಬರುವ ವಾಹನಗಳಿಗೆ ಹಳೇ ಕೇಸ್ ಇದ್ದರೆ ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ. ಹೀಗೆ ಡಿಜಿಟಲ್ ಪದ್ದತಿ ಜಾರಿಗೆ ಬಂದರೆ ಬಿಲ್ ಕೊಡದೆ ಹಣ ಪಡೆಯುವ ಕ್ರಮ ಕೂಡ ತಪ್ಪಲಿದೆ. ಪೊಲೀಸರಿಂದ ರಸ್ತೆ ಮಧ್ಯೆ ಹಣ ಪೀಕಿಸಿಕೊಳ್ಳುವ ಕಿರಿ ಕಿರಿಯನ್ನು ಬೈಕ್ ಸವಾರರು ತಪ್ಪಿಸಿಕೊಳ್ಳಲಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm