ಬ್ರೇಕಿಂಗ್ ನ್ಯೂಸ್
09-01-21 01:03 pm Bangalore Correspondent ಕರ್ನಾಟಕ
ಬೆಂಗಳೂರು, ಜ.9: ಸಂಚಾರ ನಿಯಮ ಉಲ್ಲಂಘನೆ ಮಾಡುವ ಮಂದಿಯನ್ನ ರಸ್ತೆಯಲ್ಲಿ ತಡೆದು ದಂಡ ವಿಧಿಸುವ ಕ್ರಮಕ್ಕೆ ಬೆಂಗಳೂರು ಪೋಲಿಸರು ತಿಲಾಂಜಲಿ ಇಟ್ಟಿದ್ದಾರೆ.
ಇದರಿಂದ ನಡು ರಸ್ತೆಯಲ್ಲಿ ಬೈಕ್ ಸವಾರರಿಗೆ ಆಗುತ್ತಿದ್ದ ದೊಡ್ಡ ಕಿರಿಕಿರಿ ತಪ್ಪಿದೆ. ಹಾಗಂತ ಸಂಚಾರಿ ನಿಯಮ ಉಲ್ಲಂಘನೆ ಮಾಡಿ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ನಿಮ್ಮ ವಿರುದ್ಧ ಡಿಜಿಟಲ್ ಕೇಸ್ ದಾಖಲಾಗಲಿದ್ದು ನೀವು ಸಂಚಾರಿ ನಿಯಮ ಉಲ್ಲಂಘಿಸಿದರೆ ನಿಮ್ಮ ವಿಳಾಸಕ್ಕೆ ನೋಟಿಸ್ ಬರಲಿದೆ. ಇದಕ್ಕೆ ನೀವು ದಂಡವನ್ನೂ ಪಾವತಿಸಬೇಕಾಗುತ್ತದೆ.

ಬೆಂಗಳೂರು ಮಹಾನಗರದ ರಸ್ತೆಗಳ ಮಧ್ಯೆ ವಾಹನ ತಡೆಯುವುದರಿಂದ ಟ್ರಾಫಿಕ್ ಸಮಸ್ಯೆ ಆಗುವ ಕಾರಣ ಮಾರ್ಗ ಮಧ್ಯೆ ತಡೆದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಪೊಲೀಸ್ ಇಲಾಖೆಯಿಂದ ಸೂಚನೆ ಬಂದಿದೆ. ಬದಲಿಗೆ ಯಾರು ನಿಯಮ ಉಲ್ಲಂಘನೆ ಮಾಡುತ್ತಾರೋ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ಪೋಲಿಸ್ ಇಲಾಖೆ ಸೂಚನೆ ನೀಡಿದೆ.
ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ, ದಂಡ ವಿಧಿಸುವುದರ ಬಗ್ಗೆ ಸೊಶೀಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗಿತ್ತು. ಭಾರೀ ಟೀಕೆಯೂ ಸಾರ್ವಜನಿಕರ ಕಡೆಯಿಂದ ಕೇಳಿಬಂದಿತ್ತು. ಇದರ ಪರಿಣಾಮ ಎಂಬಂತೆ ಪೋಲಿಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಇದರಂತೆ, ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನ ಯಾವುದೇ ಕಾನ್ಸ್ಟೇಬಲ್ ಅಡ್ಡಗಟ್ಟಿ ನಿಲ್ಲಿಸಬಾರದು. ಬದಲಿಗೆ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿ, ಬೈಕ್ ನಂಬರ್ ಎಂಟ್ರಿ ಮಾಡಿಕೊಂಡು ಕೇಸ್ ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಆದರೆ ದಿನಕ್ಕೆ ಕನಿಷ್ಟ 25 ಈ ರೀತಿಯ ಕೇಸ್ ದಾಖಲಿಸಬೇಕೆಂಬ ಟಾರ್ಗೆಟ್ ಅನ್ನು ಪೊಲೀಸರಿಗೆ ನೀಡಲಾಗಿದೆ.
ರಸ್ತೆಯಲ್ಲಿ ದಂಡ ವಿಧಿಸುವ ಬದಲು ಆರ್ಟಿಒ ಹಾಗೂ ವಾಯು ಮಾಲಿನ್ಯ ಪ್ರಮಾಣ ತಪಾಸಣೆಗೆ ಬರುವ ವಾಹನಗಳಿಗೆ ಹಳೇ ಕೇಸ್ ಇದ್ದರೆ ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ. ಹೀಗೆ ಡಿಜಿಟಲ್ ಪದ್ದತಿ ಜಾರಿಗೆ ಬಂದರೆ ಬಿಲ್ ಕೊಡದೆ ಹಣ ಪಡೆಯುವ ಕ್ರಮ ಕೂಡ ತಪ್ಪಲಿದೆ. ಪೊಲೀಸರಿಂದ ರಸ್ತೆ ಮಧ್ಯೆ ಹಣ ಪೀಕಿಸಿಕೊಳ್ಳುವ ಕಿರಿ ಕಿರಿಯನ್ನು ಬೈಕ್ ಸವಾರರು ತಪ್ಪಿಸಿಕೊಳ್ಳಲಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm