ಬ್ರೇಕಿಂಗ್ ನ್ಯೂಸ್
09-01-21 01:03 pm Bangalore Correspondent ಕರ್ನಾಟಕ
ಬೆಂಗಳೂರು, ಜ.9: ಸಂಚಾರ ನಿಯಮ ಉಲ್ಲಂಘನೆ ಮಾಡುವ ಮಂದಿಯನ್ನ ರಸ್ತೆಯಲ್ಲಿ ತಡೆದು ದಂಡ ವಿಧಿಸುವ ಕ್ರಮಕ್ಕೆ ಬೆಂಗಳೂರು ಪೋಲಿಸರು ತಿಲಾಂಜಲಿ ಇಟ್ಟಿದ್ದಾರೆ.
ಇದರಿಂದ ನಡು ರಸ್ತೆಯಲ್ಲಿ ಬೈಕ್ ಸವಾರರಿಗೆ ಆಗುತ್ತಿದ್ದ ದೊಡ್ಡ ಕಿರಿಕಿರಿ ತಪ್ಪಿದೆ. ಹಾಗಂತ ಸಂಚಾರಿ ನಿಯಮ ಉಲ್ಲಂಘನೆ ಮಾಡಿ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ನಿಮ್ಮ ವಿರುದ್ಧ ಡಿಜಿಟಲ್ ಕೇಸ್ ದಾಖಲಾಗಲಿದ್ದು ನೀವು ಸಂಚಾರಿ ನಿಯಮ ಉಲ್ಲಂಘಿಸಿದರೆ ನಿಮ್ಮ ವಿಳಾಸಕ್ಕೆ ನೋಟಿಸ್ ಬರಲಿದೆ. ಇದಕ್ಕೆ ನೀವು ದಂಡವನ್ನೂ ಪಾವತಿಸಬೇಕಾಗುತ್ತದೆ.
ಬೆಂಗಳೂರು ಮಹಾನಗರದ ರಸ್ತೆಗಳ ಮಧ್ಯೆ ವಾಹನ ತಡೆಯುವುದರಿಂದ ಟ್ರಾಫಿಕ್ ಸಮಸ್ಯೆ ಆಗುವ ಕಾರಣ ಮಾರ್ಗ ಮಧ್ಯೆ ತಡೆದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಪೊಲೀಸ್ ಇಲಾಖೆಯಿಂದ ಸೂಚನೆ ಬಂದಿದೆ. ಬದಲಿಗೆ ಯಾರು ನಿಯಮ ಉಲ್ಲಂಘನೆ ಮಾಡುತ್ತಾರೋ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ಪೋಲಿಸ್ ಇಲಾಖೆ ಸೂಚನೆ ನೀಡಿದೆ.
ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ, ದಂಡ ವಿಧಿಸುವುದರ ಬಗ್ಗೆ ಸೊಶೀಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗಿತ್ತು. ಭಾರೀ ಟೀಕೆಯೂ ಸಾರ್ವಜನಿಕರ ಕಡೆಯಿಂದ ಕೇಳಿಬಂದಿತ್ತು. ಇದರ ಪರಿಣಾಮ ಎಂಬಂತೆ ಪೋಲಿಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.
ಇದರಂತೆ, ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನ ಯಾವುದೇ ಕಾನ್ಸ್ಟೇಬಲ್ ಅಡ್ಡಗಟ್ಟಿ ನಿಲ್ಲಿಸಬಾರದು. ಬದಲಿಗೆ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿ, ಬೈಕ್ ನಂಬರ್ ಎಂಟ್ರಿ ಮಾಡಿಕೊಂಡು ಕೇಸ್ ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಆದರೆ ದಿನಕ್ಕೆ ಕನಿಷ್ಟ 25 ಈ ರೀತಿಯ ಕೇಸ್ ದಾಖಲಿಸಬೇಕೆಂಬ ಟಾರ್ಗೆಟ್ ಅನ್ನು ಪೊಲೀಸರಿಗೆ ನೀಡಲಾಗಿದೆ.
ರಸ್ತೆಯಲ್ಲಿ ದಂಡ ವಿಧಿಸುವ ಬದಲು ಆರ್ಟಿಒ ಹಾಗೂ ವಾಯು ಮಾಲಿನ್ಯ ಪ್ರಮಾಣ ತಪಾಸಣೆಗೆ ಬರುವ ವಾಹನಗಳಿಗೆ ಹಳೇ ಕೇಸ್ ಇದ್ದರೆ ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ. ಹೀಗೆ ಡಿಜಿಟಲ್ ಪದ್ದತಿ ಜಾರಿಗೆ ಬಂದರೆ ಬಿಲ್ ಕೊಡದೆ ಹಣ ಪಡೆಯುವ ಕ್ರಮ ಕೂಡ ತಪ್ಪಲಿದೆ. ಪೊಲೀಸರಿಂದ ರಸ್ತೆ ಮಧ್ಯೆ ಹಣ ಪೀಕಿಸಿಕೊಳ್ಳುವ ಕಿರಿ ಕಿರಿಯನ್ನು ಬೈಕ್ ಸವಾರರು ತಪ್ಪಿಸಿಕೊಳ್ಳಲಿದ್ದಾರೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm