ಬ್ರೇಕಿಂಗ್ ನ್ಯೂಸ್
12-08-20 11:55 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ನಿನ್ನೆಯ ಡಿಜಿ ಹಳ್ಳಿ ಘಟನೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಕಾನೂನು ವಿರೋಧಿ ಕೃತ್ಯಕ್ಕೆ ನಮ್ಮ ಖಂಡನೆ ಇದೆ. ಯಾವುದೇ ಧರ್ಮ, ದೇವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳಿಗೆ ಖಂಡನೆ ಇದೆ. ನವೀನ್ ಕಟ್ಟಾ ಬಿಜೆಪಿ ಅಭಿಮಾನಿ. ಆತ ಬಿಜೆಪಿಗೆ ಮತ ಹಾಕಿದ್ದ ಬಗ್ಗೆಯೂ ಪೋಸ್ಟ್ ಮಾಡಿದ್ದಾನೆ. ನವೀನ್ ಪ್ರಚೋದನಕಾರಿ ಹೇಳಿಕೆ, ಪೋಸ್ಟ್ ಮಾಡುತ್ತಿದ್ದ. ನವೀನ್ಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೂ ರಾಜಕೀಯ ಸಂಬಂಧ ಇಲ್ಲ. ನವೀನ್ಗೆ ಬಿಜೆಪಿ ಜೊತೆ ನಿಕಟ ಸಂಪರ್ಕ ಇತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ಡಿ.ಕೆ. ಶಿವಕುಮಾರ್, ಜಮೀರ್ ಅಹಮದ್, ರಾಮಲಿಂಗಾರೆಡ್ಡಿ, ಬಿ.ಕೆ. ಹರಿಪ್ರಸಾದ್, ರಿಜ್ವಾನ್ ಅರ್ಷದ್, ಕೃಷ್ಣಬೈರೇಗೌಡ, ಸಲೀಂ ಅಹಮದ್, ನಾಸೀರ್ ಅಹಮದ್ ಭಾಗಿ ಈಶ್ವರ್ ಖಂಡ್ರೆ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಇಲ್ಲಿ ಮಾತನಾಡಿದ ಡಿಕೆಶಿ, ಪೊಲೀಸರು ದೂರು ಬಂದಾಗಲೇ ಕ್ರಮ ತೆಗೆದುಕೊಳ್ಳಬೇಕಿತ್ತು. ಘಟನೆಗೆ ಪೊಲೀಸರೇ ಕಾರಣ. ಅವರ ವಿಳಂಬವೇ ಕಾರಣ. ಪೊಲೀಸರು ಘಟನೆ ತಡೆಯಲು ವಿಫಲರಾಗಿದ್ದಾರೆ ಎಂದು ಆರೋಪ ಮಾಡಿದರು.
ಪೊಲೀಸರು ಶಾಸಕರು, ಶಾಸಕರ ಮನೆಗೂ ರಕ್ಷಣೆ ಕೊಡಲಿಲ್ಲ. ಪೊಲೀಸರು ಸುಮೋಟೋ ಅಡಿ ದೂರು ದಾಖಲಿಸಿ ಸಂಜೆಯೇ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಪೊಲೀಸರು ವಿಳಂಬ ಮಾಡಿದರು. ಆ ಭಾಗ ಸೂಕ್ಚ್ಮ ಪ್ರದೇಶ. ಫೇಸ್ ಬುಕ್ ಪೋಸ್ಟ್ ಬಂದಾಗ ಪೊಲೀಸರು ಯಾಕೆ ಸುಮ್ಮನಿದ್ದರು. ಪೊಲೀಸರಿಗೆ ಇದು ಗೊತ್ತಿದ್ದೂ ಸುಮ್ಮನಿದ್ದರು. ಘಟನೆಯ ಹೊಣೆಯನ್ನು ಪೊಲೀಸರೇ ಹೊತ್ತುಕೊಳ್ಳಬೇಕು. ಪೊಲೀಸ್ ಠಾಣೆಯನ್ನೇ ಪೊಲೀಸರು ರಕ್ಷಿಸಿಕೊಳ್ಳಲು ಆಗಲಿಲ್ಲ. ನಮ್ಮ ಶಾಸಕರಿಗೂ ರಕ್ಷಣೆ ಕೊಡಲಿಲ್ಲ. ಘಟನೆ ಹಿಂದೆ ಸಂಚು ಇದೆ. ಘಟನೆ ಬಗ್ಗೆ ಪರಿಶೀಲನೆಗೆ ನಮ್ಮ 6 ಜನ ನಾಯಕರ ತಂಡ ಹೋಗುತ್ತಿದೆ. ಜೊತೆಗೆ ನಾನು ಕೂಡ ಘಟನೆ ನಡೆದ ಸ್ಥಳಕ್ಕೆ ಹೋಗುತ್ತೇನೆ ಎಂದು ಹೇಳಿದರು.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm