ಬ್ರೇಕಿಂಗ್ ನ್ಯೂಸ್
12-01-21 12:19 pm Bangalore Correspondent ಕರ್ನಾಟಕ
ಬೆಂಗಳೂರು, ಜ.12: ರಾಜ್ಯದಲ್ಲಿ ಜ. 16ರಿಂದ 16.90 ಲಕ್ಷ ಕೊರೋನಾ ಯೋಧರಿಗೆ ಲಸಿಕೆ ಹಾಕುವ ಅಭಿಯಾನ ಆರಂಭವಾಗಲಿದ್ದು, ಇದಕ್ಕಾಗಿ 235 ಲಸಿಕಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾ ಲಸಿಕೆ ವಿತರಣೆ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ಕೊರೋನಾ ಯೋಧರಾದ ಆರೋಗ್ಯ ಇಲಾಖೆ, ಕಂದಾಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗುವುದು. 28 ದಿನಗಳ ಬಳಿಕ ಅವರಿಗೆ ಎರಡನೇ ಡೋಸ್ ನೀಡಲಾಗುವುದು ಎಂದರು.

ಕಾರ್ಯಪಡೆ ರಚನೆ:
ರಾಜ್ಯಕ್ಕೆ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಎರಡೂ ಮಾದರಿಯ ಲಸಿಕೆಗಳು ಬರಲಿವೆ.
ರಾಜ್ಯಮಟ್ಟದ ಎರಡು ಪ್ರಮುಖ ದಾಸ್ತಾನು ಮಳಿಗೆಗಳಿಂದ ಜಿಲ್ಲಾ ಮಟ್ಟಕ್ಕೆ ಪೂರೈಸಲು ಕೋಲ್ಡ್ ಚೈನ್ ವ್ಯವಸ್ಥೆ ಮಾಡಿದ್ದೇವೆ. ಇವುಗಳನ್ನು ಸಮರ್ಪಕವಾಗಿ ನಿಗಾವಹಿಸಿ ಅನುಷ್ಠಾನಕ್ಕೆ ತರಲು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಕಾರ್ಯಪಡೆ ರಚಿಸಿದ್ದೇವೆ ಎಂದು ಅವರು ವಿವರಿಸಿದರು.

45 ದಿನಗಳಲ್ಲಿ ರೋಗನಿರೋಧಕ ಶಕ್ತಿ- ಸುಧಾಕರ್:
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾತನಾಡಿ, ಲಸಿಕೆ ಪಡೆದ ವ್ಯಕ್ತಿಯಲ್ಲಿ 45 ದಿನಗಳಲ್ಲಿ ಕೊರೋನಾ ಸೋಂಕಿನ ವಿರುದ್ಧದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. 45 ದಿನಗಳವರೆಗೂ ಲಸಿಕೆ ಪಡೆದವರು ಸಹ ಎಚ್ಚರವಾಗಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ ಎಂದು ತಿಳಿಸಿದರು.

ಕೊರೋನಾ ಯೋಧರ ಬಳಿಕ ಜನಸಾಮಾನ್ಯರಿಗೆ:
ಮೊದಲ ಹಂತದ ಕೊರೋನಾ ಲಸಿಕಾ ಅಭಿಯಾನದಲ್ಲಿ ಕೊರೋನಾ ಯೋಧರಿಗೆ ಮೊದಲ ಆದ್ಯತೆ ನೀಡಲಾಗುವುದು. ಕೊರೋನಾ ಯೋಧರ ಬಳಿಕ ಜನಸಾಮಾನ್ಯರಿಗೆ ಲಸಿಕೆ ನೀಡಲು ಕೇಂದ್ರ ಕ್ರಮ ಕೈಗೊಳ್ಳಲಿದೆ. ಈ ವೇಳೆ 50 ವರ್ಷದೊಳಗಿನ ಅಥವಾ ಮೇಲ್ಪಟ್ಟದೀರ್ಘಕಾಲೀನ ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರಿಗೆ ಮೊದಲ ಆದ್ಯತೆಯಾಗಿ ಗುರುತಿಸಿ ಕೊರೋನಾ ಲಸಿಕೆ ನೀಡಲಾಗುವುದು. ಈ ಬಗ್ಗೆಯೂ ಪ್ರಧಾನಮಂತ್ರಿಗಳು ಸಲಹೆ ನೀಡಿದರು ಎಂದು ಹೇಳಿದರು. ಈ ಲಸಿಕೆಯು ಕ್ಲಿನಿಕಲ್ ಪರೀಕ್ಷೆಯಾಗಿದ್ದು, ಯಾವುದೇ ಅಪಾಯವಿಲ್ಲ. ಹೀಗಾಗಿ ಜನರು ಭಯ, ಆತಂಕವಿಲ್ಲದೆ ಸುರಕ್ಷಿತವಾಗಿ ಲಸಿಕೆ ಪಡೆಯಬಹುದು ಎಂದರು.
About 16 lakh frontline workers in Karnataka will be administered Covid-19 vaccine in the first phase starting from January 16, said Chief Minister B S Yediyurappa.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm