ಬ್ರೇಕಿಂಗ್ ನ್ಯೂಸ್
13-01-21 10:52 am Source: FilimiBeat ಕರ್ನಾಟಕ
ಬೆಂಗಳೂರು, ಜ.13: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗಿರುವ ಬಹುನಿರೀಕ್ಷೆಯ ಕೆಜಿಎಫ್-2 ಟೀಸರ್ ನಂ.1 ಟ್ರೆಂಡಿಂಗ್ ನಲ್ಲಿದೆ. ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡು ಟೀಸರ್ ದಾಖಲೆ ನಿರ್ಮಿಸಿದೆ.
ಇಡೀ ಭಾರತೀಯ ಸಿನಿಮಾರಂಗವೇ ಕಾತರದಿಂದ ಕಾಯುತ್ತಿರುವ ಚಿತ್ರದ ಟೀಸರ್ ಗೆ ಈ ಪರಿ ಪ್ರತಿಕ್ರಿಯೆ ಸಿಕ್ಕಿರುವುದು ನೋಡಿ ಭಾರತೀಯ ಸಿನಿಮಾರಂಗ ದಂಗ್ ಆಗಿದೆ. ಕನ್ನಡ ಚಿತ್ರದ ಟೀಸರ್ ವೊಂದು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರೀತಿಗೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ.
ಟೀಸರ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟೀಸರ್ ಸಂಬಂಧ ಯಶ್ ಗೆ ನೋಟಿಸ್ ನೀಡಿದೆ. ಟೀಸರ್ ನಲ್ಲಿ ಯಶ್ ಗನ್ ನಿಂದ ಸಿಗರೇಟ್ ಹಚ್ಚುವ ದೃಶ್ಯವಿದೆ. ಇದಕ್ಕೆ ನಿಯಮದ ಪ್ರಕಾರ 'ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ' ಎನ್ನುವ ಕ್ಯಾಪ್ಷನ್ ಹಾಕಬೇಕು. ಆದರೆ ಟೀಸರ್ ನಲ್ಲಿ ಹಾಕಿಲ್ಲ. ಇದು ಧೂಮಪಾನ ಪ್ರಚೋದಿಸುತ್ತಿದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹಾಗಾಗಿ ಈ ದೃಶ್ಯವನ್ನು ತೆಗೆದು ಹಾಕುವಂತೆ ಹೇಳಿದೆ.
ಲಕ್ಷಾಂತರ ಯುವ ಅಭಿಮಾನಿಗಳನ್ನು ಹೊಂದಿರುವ ಮತ್ತು ಸಾಮಾಜಿಕ ಕಳಕಳಿ ಇರುವ ಯಶ್ ಇಂತಹ ದೃಶ್ಯಗಳನ್ನು ಯುವ ಜನತೆ ಅನುಸರಿಸುವುದು ಸಾಮಾನ್ಯ. ಇದರಿಂದ ಕ್ಯಾನ್ಸರ್ ಮುಂತಾದ ಕಾಯಿಲೆಗಳಿಗೆ ಯುವ ಜನರು ಒಳಗಾಗುವ ಸಾಧ್ಯತೆ ಇದೆ. ಹಾಗಾಗಿ ಇಂತಹ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. ಅಂದಹಾಗೆ ಟೀಸರ್ ನಲ್ಲಿ ಯಶ್ ಸಿಗರೇಟ್ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗನ್ ನಿಂದ ಸಿಗರೇಟು ಹಚ್ಚುತ್ತಿರುವ ಫೋಟೋವನ್ನು ಸ್ಕ್ರೀನ್ ಶಾಟ್ ತೆಗೆದು ಅಭಿಮಾನಿಗಳು ಶೇರ್ ಮಾಡುತ್ತಿದ್ದಾರೆ. ಈ ದೃಶ್ಯಕ್ಕೆ ಈಗ ಆಕ್ಷೇಪ ವ್ಯಕ್ತವಾಗಿದೆ.
Health department officials issue notice to KGF 2 Actor Yash for not explicating No Smoking Heading while using a gun to smoke in the movie teaser.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am