ಬ್ರೇಕಿಂಗ್ ನ್ಯೂಸ್
13-01-21 10:52 am Source: FilimiBeat ಕರ್ನಾಟಕ
ಬೆಂಗಳೂರು, ಜ.13: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗಿರುವ ಬಹುನಿರೀಕ್ಷೆಯ ಕೆಜಿಎಫ್-2 ಟೀಸರ್ ನಂ.1 ಟ್ರೆಂಡಿಂಗ್ ನಲ್ಲಿದೆ. ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡು ಟೀಸರ್ ದಾಖಲೆ ನಿರ್ಮಿಸಿದೆ.
ಇಡೀ ಭಾರತೀಯ ಸಿನಿಮಾರಂಗವೇ ಕಾತರದಿಂದ ಕಾಯುತ್ತಿರುವ ಚಿತ್ರದ ಟೀಸರ್ ಗೆ ಈ ಪರಿ ಪ್ರತಿಕ್ರಿಯೆ ಸಿಕ್ಕಿರುವುದು ನೋಡಿ ಭಾರತೀಯ ಸಿನಿಮಾರಂಗ ದಂಗ್ ಆಗಿದೆ. ಕನ್ನಡ ಚಿತ್ರದ ಟೀಸರ್ ವೊಂದು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರೀತಿಗೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ.
ಟೀಸರ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟೀಸರ್ ಸಂಬಂಧ ಯಶ್ ಗೆ ನೋಟಿಸ್ ನೀಡಿದೆ. ಟೀಸರ್ ನಲ್ಲಿ ಯಶ್ ಗನ್ ನಿಂದ ಸಿಗರೇಟ್ ಹಚ್ಚುವ ದೃಶ್ಯವಿದೆ. ಇದಕ್ಕೆ ನಿಯಮದ ಪ್ರಕಾರ 'ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ' ಎನ್ನುವ ಕ್ಯಾಪ್ಷನ್ ಹಾಕಬೇಕು. ಆದರೆ ಟೀಸರ್ ನಲ್ಲಿ ಹಾಕಿಲ್ಲ. ಇದು ಧೂಮಪಾನ ಪ್ರಚೋದಿಸುತ್ತಿದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹಾಗಾಗಿ ಈ ದೃಶ್ಯವನ್ನು ತೆಗೆದು ಹಾಕುವಂತೆ ಹೇಳಿದೆ.
ಲಕ್ಷಾಂತರ ಯುವ ಅಭಿಮಾನಿಗಳನ್ನು ಹೊಂದಿರುವ ಮತ್ತು ಸಾಮಾಜಿಕ ಕಳಕಳಿ ಇರುವ ಯಶ್ ಇಂತಹ ದೃಶ್ಯಗಳನ್ನು ಯುವ ಜನತೆ ಅನುಸರಿಸುವುದು ಸಾಮಾನ್ಯ. ಇದರಿಂದ ಕ್ಯಾನ್ಸರ್ ಮುಂತಾದ ಕಾಯಿಲೆಗಳಿಗೆ ಯುವ ಜನರು ಒಳಗಾಗುವ ಸಾಧ್ಯತೆ ಇದೆ. ಹಾಗಾಗಿ ಇಂತಹ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. ಅಂದಹಾಗೆ ಟೀಸರ್ ನಲ್ಲಿ ಯಶ್ ಸಿಗರೇಟ್ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗನ್ ನಿಂದ ಸಿಗರೇಟು ಹಚ್ಚುತ್ತಿರುವ ಫೋಟೋವನ್ನು ಸ್ಕ್ರೀನ್ ಶಾಟ್ ತೆಗೆದು ಅಭಿಮಾನಿಗಳು ಶೇರ್ ಮಾಡುತ್ತಿದ್ದಾರೆ. ಈ ದೃಶ್ಯಕ್ಕೆ ಈಗ ಆಕ್ಷೇಪ ವ್ಯಕ್ತವಾಗಿದೆ.
Health department officials issue notice to KGF 2 Actor Yash for not explicating No Smoking Heading while using a gun to smoke in the movie teaser.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm