ಬ್ರೇಕಿಂಗ್ ನ್ಯೂಸ್
13-01-21 12:32 pm Bangalore Correspondant ಕರ್ನಾಟಕ
ಮೈಸೂರು, ಜ.12: ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳಲಿಲ್ಲ, ದೇವರು ಅವರಿಗೆ ಒಳ್ಳೇದು ಮಾಡಲ್ಲ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ ಸಂಪುಟ ವಿಸ್ತರಣೆ ವೇಳೆ, ನಾಗೇಶ್ ಅವರನ್ನು ಕೈಬಿಟ್ಟಿದ್ದು ಮತ್ತು ಸರಕಾರ ಬರಲು ಕಾರಣವಾದವರಿಗೆ ಸಚಿವ ಸ್ಥಾನಕ್ಕೆ ಪರಿಗಣಿಸದ ವಿಚಾರದಲ್ಲಿ ಕಿಡಿಕಾರಿದ್ದಾರೆ. ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಯಾಕೆ ಕೈಬಿಡಬೇಕಿತ್ತು. ಯೋಗೀಶ್ವರ್ ಅವರನ್ನು ಯಾಕೆ ಸೇರಿಸಿಕೊಳ್ಳಬೇಕಿತ್ತು. ಮುನಿರತ್ನ ಅವರನ್ನು ಯಾಕೆ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ನಾವು ಸರಕಾರ ಬರಲು ಕಾರಣವಾಗಿದ್ದು. ರಾಜಕೀಯಕ್ಕಷ್ಟೆ ನಾವು ಬೇಕು. ರಾಜಕೀಯ ನಾಯಕರು ತಮ್ಮ ಮಾತು ಉಳಿಸಿಕೊಳ್ಳಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುತ್ತಾರೆ ಎಂದು ಭರವಸೆ ಹೊಂದಿದ್ದೆವು. ಸರಕಾರ ಬರಲು ಕಾರಣವಾಗಿದ್ದ 16 ಮಂದಿಗೆ ಸಚಿವ ಸ್ಥಾನ ಕೊಡುವ ಭರವಸೆಯನ್ನು ನೀಡಿದ್ದರು. ಮಾತು ಉಳಿಸಿಕೊಳ್ಳುವುದಾಗಿ ಹೇಳುತ್ತಾ ಬಂದಿದ್ದರು. ಮುನಿರತ್ನರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಸಚಿವ ಸ್ಥಾನ ನೀಡುವಾಗ ತಮ್ಮ ಮಾತನ್ನು ಮರೆತಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲ್ಲ. ಸಿದ್ದಲಿಂಗೇಶ್ವರ ಒಳ್ಳೇದು ಮಾಡೋದಿಲ್ಲ ಅಂತಾ ಪರೋಕ್ಷವಾಗಿ ಶಾಪ ಹಾಕಿದ್ದಾರೆ.
ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ ಏಳು ಮಂದಿಯನ್ನು ಸೇರಿಸಿಕೊಳ್ಳುವುದಾಗಿ ಪ್ರಕಟಿಸಿದ್ದಾರೆ. ಇದೇ ವೇಳೆ, ಮುನಿರತ್ನ ಸೇರಿದಂತೆ ವಲಸಿಗ ಶಾಸಕರನ್ನು ಬಿಟ್ಟು ಉಳಿದವರಿಗೆ ಸ್ಥಾನ ನೀಡುತ್ತಿರುವುದಕ್ಕೆ ಅಸಮಾಧಾನ ಭುಗಿಲೆದ್ದಿದೆ.
Mysore H Vishwanath slams at CM B.S Yediyurappa over Karnataka cabinet expansion stating God do any good to him hereafter.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm