ಬ್ರೇಕಿಂಗ್ ನ್ಯೂಸ್
13-01-21 05:13 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜ.13: ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ಬೆಂಗಳೂರಿನ ನಿವಾಸಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಸರಕಾರದ ಅಭಿಪ್ರಾಯ ಕೇಳಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಾಧೀಶರಾದ ಅಭಯ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗ್ದುಮ್ ಅವರಿದ್ದ ದ್ವಿಸದಸ್ಯ ಪೀಠ, ಬೆಂಗಳೂರಿನ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಂವಿಧಾನದಲ್ಲಿ ಉಲ್ಲೇಖಿತ ಮೂಲಭೂತ ಹಕ್ಕು ಆಗಿರುವ ಆರ್ಟಿಕಲ್ 13, 19(1) ಜಿ ಮತ್ತು 21 ಕಲಂ ಅನ್ನು ಉಲ್ಲಂಘನೆ ಮಾಡುತ್ತದೆ ಎಂದು ಮೊಹ್ಮದ್ ಜಮೀಲ್ ವಾದಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕ ಸರಕಾರದ ಪರವಾಗಿ ಕೋರ್ಟಿನ ಪ್ರಶ್ನೆಗೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಈ ಬಗ್ಗೆ ಉತ್ತರ ನೀಡಲು ಸಮಯ ಬೇಕಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಸರಕಾರ ಯಾವೆಲ್ಲ ಕಾನೂನನ್ನು ಪರಿಗಣಿಸಿದೆ ಎಂಬ ಬಗ್ಗೆ ಪರಿಶೀಲಿಸಿ ಉತ್ತರ ನೀಡುತ್ತೇವೆ ಎಂದಿದ್ದಾರೆ.
ಜಮೀಲ್ ಸಲ್ಲಿಸಿದ ಅರ್ಜಿಯ ಜೊತೆಗೆ ಮುಂಬೈ ಹೈಕೋರ್ಟ್ ನೀಡಿದ ತೀರ್ಪಿನ ಅಂಶವನ್ನೂ ಉಲ್ಲೇಖ ಮಾಡಿದ್ದಾರೆ. ಶೇಖ್ ಝಹೀದ್ ಮುಕ್ತರ್ ಮತ್ತು ಮಹಾರಾಷ್ಟ್ರ ಸರಕಾರದ ನಡುವಿನ ಪ್ರಕರಣದಲ್ಲಿ ಕೋರ್ಟ್, ಜನರ ಆಹಾರದ ಹಕ್ಕಿನ ವಿಚಾರದಲ್ಲಿ ಸರಕಾರ ನಿರ್ದೇಶನ ನೀಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದಿತ್ತು.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಜನರ ಆಹಾರದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಮೊಹಮ್ಮದ್ ಜಮೀಲ್ ವಾದಿಸಿದ್ದು, ಇದರ ಮುಂದಿನ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿದೆ.
The Karnataka High Court on Tuesday issued notice on the recent ordinance brought by the Karnataka Government to prevent cattle slaughter.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm