ಬ್ರೇಕಿಂಗ್ ನ್ಯೂಸ್
13-01-21 05:13 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜ.13: ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ಬೆಂಗಳೂರಿನ ನಿವಾಸಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಸರಕಾರದ ಅಭಿಪ್ರಾಯ ಕೇಳಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಾಧೀಶರಾದ ಅಭಯ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗ್ದುಮ್ ಅವರಿದ್ದ ದ್ವಿಸದಸ್ಯ ಪೀಠ, ಬೆಂಗಳೂರಿನ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಂವಿಧಾನದಲ್ಲಿ ಉಲ್ಲೇಖಿತ ಮೂಲಭೂತ ಹಕ್ಕು ಆಗಿರುವ ಆರ್ಟಿಕಲ್ 13, 19(1) ಜಿ ಮತ್ತು 21 ಕಲಂ ಅನ್ನು ಉಲ್ಲಂಘನೆ ಮಾಡುತ್ತದೆ ಎಂದು ಮೊಹ್ಮದ್ ಜಮೀಲ್ ವಾದಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕ ಸರಕಾರದ ಪರವಾಗಿ ಕೋರ್ಟಿನ ಪ್ರಶ್ನೆಗೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಈ ಬಗ್ಗೆ ಉತ್ತರ ನೀಡಲು ಸಮಯ ಬೇಕಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಸರಕಾರ ಯಾವೆಲ್ಲ ಕಾನೂನನ್ನು ಪರಿಗಣಿಸಿದೆ ಎಂಬ ಬಗ್ಗೆ ಪರಿಶೀಲಿಸಿ ಉತ್ತರ ನೀಡುತ್ತೇವೆ ಎಂದಿದ್ದಾರೆ.
ಜಮೀಲ್ ಸಲ್ಲಿಸಿದ ಅರ್ಜಿಯ ಜೊತೆಗೆ ಮುಂಬೈ ಹೈಕೋರ್ಟ್ ನೀಡಿದ ತೀರ್ಪಿನ ಅಂಶವನ್ನೂ ಉಲ್ಲೇಖ ಮಾಡಿದ್ದಾರೆ. ಶೇಖ್ ಝಹೀದ್ ಮುಕ್ತರ್ ಮತ್ತು ಮಹಾರಾಷ್ಟ್ರ ಸರಕಾರದ ನಡುವಿನ ಪ್ರಕರಣದಲ್ಲಿ ಕೋರ್ಟ್, ಜನರ ಆಹಾರದ ಹಕ್ಕಿನ ವಿಚಾರದಲ್ಲಿ ಸರಕಾರ ನಿರ್ದೇಶನ ನೀಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದಿತ್ತು.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಜನರ ಆಹಾರದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಮೊಹಮ್ಮದ್ ಜಮೀಲ್ ವಾದಿಸಿದ್ದು, ಇದರ ಮುಂದಿನ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿದೆ.
The Karnataka High Court on Tuesday issued notice on the recent ordinance brought by the Karnataka Government to prevent cattle slaughter.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm