ಬ್ರೇಕಿಂಗ್ ನ್ಯೂಸ್
13-01-21 05:13 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜ.13: ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ಬೆಂಗಳೂರಿನ ನಿವಾಸಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಸರಕಾರದ ಅಭಿಪ್ರಾಯ ಕೇಳಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಾಧೀಶರಾದ ಅಭಯ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗ್ದುಮ್ ಅವರಿದ್ದ ದ್ವಿಸದಸ್ಯ ಪೀಠ, ಬೆಂಗಳೂರಿನ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಂವಿಧಾನದಲ್ಲಿ ಉಲ್ಲೇಖಿತ ಮೂಲಭೂತ ಹಕ್ಕು ಆಗಿರುವ ಆರ್ಟಿಕಲ್ 13, 19(1) ಜಿ ಮತ್ತು 21 ಕಲಂ ಅನ್ನು ಉಲ್ಲಂಘನೆ ಮಾಡುತ್ತದೆ ಎಂದು ಮೊಹ್ಮದ್ ಜಮೀಲ್ ವಾದಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕ ಸರಕಾರದ ಪರವಾಗಿ ಕೋರ್ಟಿನ ಪ್ರಶ್ನೆಗೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಈ ಬಗ್ಗೆ ಉತ್ತರ ನೀಡಲು ಸಮಯ ಬೇಕಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಸರಕಾರ ಯಾವೆಲ್ಲ ಕಾನೂನನ್ನು ಪರಿಗಣಿಸಿದೆ ಎಂಬ ಬಗ್ಗೆ ಪರಿಶೀಲಿಸಿ ಉತ್ತರ ನೀಡುತ್ತೇವೆ ಎಂದಿದ್ದಾರೆ.
ಜಮೀಲ್ ಸಲ್ಲಿಸಿದ ಅರ್ಜಿಯ ಜೊತೆಗೆ ಮುಂಬೈ ಹೈಕೋರ್ಟ್ ನೀಡಿದ ತೀರ್ಪಿನ ಅಂಶವನ್ನೂ ಉಲ್ಲೇಖ ಮಾಡಿದ್ದಾರೆ. ಶೇಖ್ ಝಹೀದ್ ಮುಕ್ತರ್ ಮತ್ತು ಮಹಾರಾಷ್ಟ್ರ ಸರಕಾರದ ನಡುವಿನ ಪ್ರಕರಣದಲ್ಲಿ ಕೋರ್ಟ್, ಜನರ ಆಹಾರದ ಹಕ್ಕಿನ ವಿಚಾರದಲ್ಲಿ ಸರಕಾರ ನಿರ್ದೇಶನ ನೀಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದಿತ್ತು.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಜನರ ಆಹಾರದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಮೊಹಮ್ಮದ್ ಜಮೀಲ್ ವಾದಿಸಿದ್ದು, ಇದರ ಮುಂದಿನ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿದೆ.
The Karnataka High Court on Tuesday issued notice on the recent ordinance brought by the Karnataka Government to prevent cattle slaughter.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm