ಬ್ರೇಕಿಂಗ್ ನ್ಯೂಸ್
13-01-21 05:13 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜ.13: ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ಬೆಂಗಳೂರಿನ ನಿವಾಸಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಸರಕಾರದ ಅಭಿಪ್ರಾಯ ಕೇಳಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಾಧೀಶರಾದ ಅಭಯ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗ್ದುಮ್ ಅವರಿದ್ದ ದ್ವಿಸದಸ್ಯ ಪೀಠ, ಬೆಂಗಳೂರಿನ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಂವಿಧಾನದಲ್ಲಿ ಉಲ್ಲೇಖಿತ ಮೂಲಭೂತ ಹಕ್ಕು ಆಗಿರುವ ಆರ್ಟಿಕಲ್ 13, 19(1) ಜಿ ಮತ್ತು 21 ಕಲಂ ಅನ್ನು ಉಲ್ಲಂಘನೆ ಮಾಡುತ್ತದೆ ಎಂದು ಮೊಹ್ಮದ್ ಜಮೀಲ್ ವಾದಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕ ಸರಕಾರದ ಪರವಾಗಿ ಕೋರ್ಟಿನ ಪ್ರಶ್ನೆಗೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಈ ಬಗ್ಗೆ ಉತ್ತರ ನೀಡಲು ಸಮಯ ಬೇಕಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಸರಕಾರ ಯಾವೆಲ್ಲ ಕಾನೂನನ್ನು ಪರಿಗಣಿಸಿದೆ ಎಂಬ ಬಗ್ಗೆ ಪರಿಶೀಲಿಸಿ ಉತ್ತರ ನೀಡುತ್ತೇವೆ ಎಂದಿದ್ದಾರೆ.
ಜಮೀಲ್ ಸಲ್ಲಿಸಿದ ಅರ್ಜಿಯ ಜೊತೆಗೆ ಮುಂಬೈ ಹೈಕೋರ್ಟ್ ನೀಡಿದ ತೀರ್ಪಿನ ಅಂಶವನ್ನೂ ಉಲ್ಲೇಖ ಮಾಡಿದ್ದಾರೆ. ಶೇಖ್ ಝಹೀದ್ ಮುಕ್ತರ್ ಮತ್ತು ಮಹಾರಾಷ್ಟ್ರ ಸರಕಾರದ ನಡುವಿನ ಪ್ರಕರಣದಲ್ಲಿ ಕೋರ್ಟ್, ಜನರ ಆಹಾರದ ಹಕ್ಕಿನ ವಿಚಾರದಲ್ಲಿ ಸರಕಾರ ನಿರ್ದೇಶನ ನೀಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದಿತ್ತು.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಜನರ ಆಹಾರದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಮೊಹಮ್ಮದ್ ಜಮೀಲ್ ವಾದಿಸಿದ್ದು, ಇದರ ಮುಂದಿನ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿದೆ.
The Karnataka High Court on Tuesday issued notice on the recent ordinance brought by the Karnataka Government to prevent cattle slaughter.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm