ಬ್ರೇಕಿಂಗ್ ನ್ಯೂಸ್
13-01-21 05:13 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜ.13: ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ಬೆಂಗಳೂರಿನ ನಿವಾಸಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಸರಕಾರದ ಅಭಿಪ್ರಾಯ ಕೇಳಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಾಧೀಶರಾದ ಅಭಯ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗ್ದುಮ್ ಅವರಿದ್ದ ದ್ವಿಸದಸ್ಯ ಪೀಠ, ಬೆಂಗಳೂರಿನ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಂವಿಧಾನದಲ್ಲಿ ಉಲ್ಲೇಖಿತ ಮೂಲಭೂತ ಹಕ್ಕು ಆಗಿರುವ ಆರ್ಟಿಕಲ್ 13, 19(1) ಜಿ ಮತ್ತು 21 ಕಲಂ ಅನ್ನು ಉಲ್ಲಂಘನೆ ಮಾಡುತ್ತದೆ ಎಂದು ಮೊಹ್ಮದ್ ಜಮೀಲ್ ವಾದಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕ ಸರಕಾರದ ಪರವಾಗಿ ಕೋರ್ಟಿನ ಪ್ರಶ್ನೆಗೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಈ ಬಗ್ಗೆ ಉತ್ತರ ನೀಡಲು ಸಮಯ ಬೇಕಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಸರಕಾರ ಯಾವೆಲ್ಲ ಕಾನೂನನ್ನು ಪರಿಗಣಿಸಿದೆ ಎಂಬ ಬಗ್ಗೆ ಪರಿಶೀಲಿಸಿ ಉತ್ತರ ನೀಡುತ್ತೇವೆ ಎಂದಿದ್ದಾರೆ.
ಜಮೀಲ್ ಸಲ್ಲಿಸಿದ ಅರ್ಜಿಯ ಜೊತೆಗೆ ಮುಂಬೈ ಹೈಕೋರ್ಟ್ ನೀಡಿದ ತೀರ್ಪಿನ ಅಂಶವನ್ನೂ ಉಲ್ಲೇಖ ಮಾಡಿದ್ದಾರೆ. ಶೇಖ್ ಝಹೀದ್ ಮುಕ್ತರ್ ಮತ್ತು ಮಹಾರಾಷ್ಟ್ರ ಸರಕಾರದ ನಡುವಿನ ಪ್ರಕರಣದಲ್ಲಿ ಕೋರ್ಟ್, ಜನರ ಆಹಾರದ ಹಕ್ಕಿನ ವಿಚಾರದಲ್ಲಿ ಸರಕಾರ ನಿರ್ದೇಶನ ನೀಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದಿತ್ತು.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಜನರ ಆಹಾರದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಮೊಹಮ್ಮದ್ ಜಮೀಲ್ ವಾದಿಸಿದ್ದು, ಇದರ ಮುಂದಿನ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿದೆ.
The Karnataka High Court on Tuesday issued notice on the recent ordinance brought by the Karnataka Government to prevent cattle slaughter.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am