ಬ್ರೇಕಿಂಗ್ ನ್ಯೂಸ್
18-01-21 11:57 am Headline Karnataka News Network ಕರ್ನಾಟಕ
ಬೆಂಗಳೂರು, ಜ.18 : ಗಡಿ ವಿವಾದದ ಬಗ್ಗೆ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಸಿಎಂ ಬಿ.ಎಸ್.ಯಡಿಯೂರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉದ್ಧಟತನ ಪ್ರದರ್ಶಿಸಿದ್ದಾರೆ ಎಂದು ಟ್ವಿಟರ್ ನಲ್ಲಿ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಎಸ್ ವೈ, “ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಹೊಂದಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮಾತನಾಡಿರುವುದು ಅವರ ಉದ್ಧಟತನಕ್ಕೆ ಸಾಕ್ಷಿ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ’’

“ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ” ಎಂದು ಯಡಿಯೂರಪ್ಪ ಹೇಳಿದ್ದಾರೆ.
“ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಹೇಳಿದ್ದರು. ಅವರ ಈ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ , ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಚಾಟಿ ಬೀಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm