ಬ್ರೇಕಿಂಗ್ ನ್ಯೂಸ್
13-08-20 01:20 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್.12: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ದಾಂಧಲೆ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಶುರುವಾಗಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಲಿತರ ಪರವೋ ಇಲ್ಲ ಭಯೋತ್ಪಾದಕರ ಪರವೋ ಎಂಬ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಠಕ್ಕರ್ ಕೊಟ್ಟಿದ್ದಾರೆ.
"ನಳಿನ್ ಕುಮಾರ್ ಕಟೀಲ್ ಅವರೇ ನಾವು ಮನುಷ್ಯರ ಪರ, ಮನುಷ್ಯವಿರೋಧಿಗಳ ಪರ ಅಲ್ಲ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ. ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ?" ಎಂದು ಟ್ವಿಟರ್ ನಲ್ಲಿ ಟಾಂಗ್ ನೀಡಿದ್ದಾರೆ.

ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮರು ಪ್ರಶ್ನೆ ಹಾಕಿದ್ದಾರೆ. "ನೀವು ದಲಿತರ ಪರವೋ? ಹಿಂದೂಗಳ ಪರವೋ?, ನೀವೊಬ್ಬ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ?, ಅವರು ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು?, ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ?" ಎಂದು ಟ್ವೀಟ್ ಮಾಡಿದ್ದಾರೆ.
ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್, ಒಂದು ಸಮುದಾಯದ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆ ಮೊದಲಿಗೆ ಕಾವಲ್ ಬೈರಸಂದ್ರದಲ್ಲಿರುವ ಶಾಸಕರ ನಿವಾಸದ ಎದುರು ಆಗಸ್ಟ್.11ರ ರಾತ್ರಿ 8 ಗಂಟೆ ಸುಮಾರಿಗೆ ನೂರಾರು ಮಂದಿ ಉದ್ರಿಕ್ತರು ನೆರೆದು ಗಲಾಟೆ ಶುರು ಮಾಡಿದರು. ನೋಡನೋಡುತ್ತಿದ್ದಂತೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಶಾಸಕರ ಮನೆ ಗಾಜುಗಳಿಗೆ ಕಲ್ಲುತೂರಿದ ಉದ್ರಿಕ್ತರು ಮನೆ ಎದುರಿಗಿದ್ದ ವಾಹನಗಳನ್ನು ಪುಡಿಗಟ್ಟಿದರು. ದುಷ್ಕರ್ಮಿಗಳು ನಡೆಸಿದ ದುಷ್ಕೃತ್ಯಕ್ಕೆ ಶಾಸಕರ ನೆಲಮಹಡಿಯು ಸಂಪೂರ್ಣ ಸುಟ್ಟು ಭಸ್ಮವಾಯಿತು. ಈ ಘಟನೆಯನ್ನು ಖಂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು.
.@nalinkateel ಅವರೇ, ನಾವು ಮನುಷ್ಯರ ಪರ,
— Siddaramaiah (@siddaramaiah) August 13, 2020
ಮನುಷ್ಯವಿರೋಧಿಗಳ ಪರ ಅಲ್ಲ,
ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ,
ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ.
ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ?
1/2 pic.twitter.com/y2ZN3rQqtA
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm