ಬ್ರೇಕಿಂಗ್ ನ್ಯೂಸ್
21-01-21 12:45 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜ.21: ಸಿಎಂ ಯಡಿಯೂರಪ್ಪ ಸಂಪುಟದ ಸಚಿವರ ಖಾತೆಗಳನ್ನು ಅದಲು ಬದಲು ಮಾಡಿದ್ದಾರೆ. ಅಲ್ಲದೆ, ಕೆಲವರ ಖಾತೆಗಳನ್ನು ಬದಲಿಸಿ, ಹೊಸತಾಗಿ ಸಚಿವರಾದವರಿಗೆ ಪ್ರಮುಖ ಖಾತೆಗಳನ್ನು ನೀಡಿದ್ದಾರೆ.
ಸಿಎಂ ಯಡಿಯೂರಪ್ಪ ಹಣಕಾಸು, ಇಂಧನ ಮತ್ತು ಬೆಂಗಳೂರು ನಗರಬಾಭಿವೃದ್ಧಿ ಖಾತೆಗಳನ್ನು ತಮ್ಮ ಜೊತೆಗೇ ಇರಿಸಿಕೊಂಡಿದ್ದಾರೆ. ಆರೋಗ್ಯ ಸಚಿವ ಸುಧಾಕರ್ ಬಳಿ ಹೆಚ್ಚುವರಿಯಾಗಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ಜೆ.ಸಿ.ಮಾಧುಸ್ವಾಮಿಗೆ ನೀಡಲಾಗಿದೆ. ಮಾಧುಸ್ವಾಮಿ ಬಳಿಯಿದ್ದ ಕಾನೂನು ಮತ್ತು ಸಂಸದೀಯ ಖಾತೆಗಳನ್ನು ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಮಾಧುಸ್ವಾಮಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಹೆಚ್ಚುವರಿ ನೀಡಲಾಗಿದೆ.

ಕಳೆದ ವಾರ ಸಂಪುಟಕ್ಕೆ ಸೇರಿದ ಸಿ.ಪಿ.ಯೋಗೀಶ್ವರ್ ಸಣ್ಣ ನೀರಾವರಿ ಖಾತೆಯನ್ನು ಪಡೆದಿದ್ದಾರೆ. ಆರ್.ಶಂಕರ್ ಪೌರಾಡಳಿತ ಮತ್ತು ರೇಷ್ಮೆ ಇಲಾಖೆ ಖಾತೆಗಳನ್ನು ಪಡೆದಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಬಳಿಯಿದ್ದ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಖಾತೆಗಳನ್ನು ನೂತನವಾಗಿ ಸಚಿವರಾದ ಸುಳ್ಯದ ಎಸ್.ಅಂಗಾರ ಅವರಿಗೆ ನೀಡಲಾಗಿದೆ. ಉಳಿದಂತೆ ಆನಂದ ಸಿಂಗ್ ಬಳಿಯಿದ್ದ ಅರಣ್ಯ ಖಾತೆಯನ್ನು ಅರವಿಂದ ಲಿಂಬಾವಳಿಗೆ, ಸಿ.ಸಿ.ಪಾಟೀಲ್ ಬಳಿಯಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆಯನ್ನು ಅರವಿಂದ ಲಿಂಬಾವಳಿಗೆ ನೀಡಲಾಗಿದೆ.

ಎಂಟಿಬಿ ನಾಗರಾಜ್ ಅವರಿಗೆ ಆರ್.ನಾಗೇಶ್ ಅವರಿಂದ ತೆರವಾಗಿದ್ದ ಅಬಕಾರಿ ಖಾತೆಯನ್ನು ನೀಡಲಾಗಿದೆ. ಕೋಟ ಶ್ರೀನಿವಾಸ ಪೂಜಾರಿಗೆ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ನೀಡಲಾಗಿದೆ. ಉಮೇಶ್ ಕತ್ತಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ನೀಡಲಾಗಿದೆ.
ಸುಧಾಕರ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆನಂದ ಸಿಂಗ್ ಪ್ರವಾಸೋದ್ಯಮ, ಗೋಪಾಲಯ್ಯ ತೋಟಗಾರಿಕೆ ಮತ್ತು ಸಕ್ಕರೆ, ನಾರಾಯಣ ಗೌಡರಿಗೆ ಯುವಜನ, ಕ್ರೀಡೆ ಮತ್ತು ವಕ್ಫ್ ಇಲಾಖೆಯನ್ನು ಕೊಡಲಾಗಿದೆ. ನಾರಾಯಣ ಗೌಡ ಈ ಹಿಂದೆ ತೋಟಗಾರಿಕೆ ಸಚಿವರಾಗಿದ್ದರು. ಉಳಿದಂತೆ ಸುರೇಶ್ ಕುಮಾರ್, ಈಶ್ವರಪ್ಪ, ರಾಮುಲು ಖಾತೆಗಳನ್ನು ಬದಲು ಮಾಡಿಲ್ಲ. ಖಾತೆಗಳನ್ನು ಬದಲಿಸಿ ಸಿಎಂ ಯಡಿಯೂರಪ್ಪ ಮಾಡಿರುವ ಆದೇಶಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು ಅಧಿಕೃತವಾಗಿ ಜಾರಿಗೆ ಬಂದಿದೆ.
ಖಾತೆಗಳನ್ನು ಅದಲು ಬದಲು ಮಾಡಿರುವ ವಿಚಾರದಲ್ಲಿಯೂ ಕೆಲವು ಸಚಿವರು ಅಸಮಾಧಾನಗೊಂಡಿದ್ದಾರೆ. ಅಸಾಧಾನಗೊಂಡ ಸಚಿವರು ಸಚಿವ ಸುಧಾಕರ್ ಮನೆಯಲ್ಲಿ ಸೇರಿದ್ದು, ಆಕ್ರೋಶ ಹೊರಹಾಕಿದ್ದಾರೆ. ನಾರಾಯಣ ಗೌಡ, ಎಂಟಿಬಿ, ಗೋಪಾಲಯ್ಯ, ಆನಂದ್ ಸಿಗ್ ಸೇರಿದ್ದಾರೆ.
Chief minister B S Yediyurappa changes allocation of portfolios to the ministers of Karnataka.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm