ಬ್ರೇಕಿಂಗ್ ನ್ಯೂಸ್
22-01-21 09:10 am Santosh ಕರ್ನಾಟಕ
ಶಿವಮೊಗ್ಗ, ಜನವರಿ 22: ಇಲ್ಲಿನ ಹುಣಸವಾಡಿಯ ಅಬ್ಬಲಗೇರಿ ಎಂಬಲ್ಲಿ ರೈಲ್ವೆ ಇಲಾಖೆಗೆ ಸೇರಿದ ಕ್ರಷರ್ನಲ್ಲಿ ಭಾರಿ ಸ್ಪೋಟ ಸಂಭವಿಸಿದ್ದು ಹತ್ತಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ಲೋಡ್ ಗಟ್ಟಲೆ ಡೈನಾಮೈಟ್ ಸಾಗಿಸುತ್ತಿದ್ದ ವೇಳೆ ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಸ್ಫೋಟಗೊಂಡಿದೆ. ಸ್ಫೋಟಗೊಂಡ ಲಾರಿಯಲ್ಲಿ ಎಷ್ಟು ಮಂದಿ ಇದ್ದರು, ಕ್ರಷರ್ ಬಳಿ ಎಷ್ಟು ಮಂದಿ ಇದ್ದರು ಎಂಬ ಸರಿಯಾದ ಮಾಹಿತಿ ಯಾರಲ್ಲೂ ಇಲ್ಲ. ಸ್ಫೋಟದ ತೀವ್ರತೆಗೆ ದೇಹ ಛಿದ್ರಗೊಂಡು ಕಿಮೀ ದೂರಕ್ಕೆ ಎಸೆಯಲ್ಪಟ್ಟಿದೆ. ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ.
ಸ್ಫೋಟದ ಸದ್ದು ಇಡೀ ಶಿವಮೊಗ್ಗ , ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೇಳಿಬಂದಿದ್ದು ಭೂಕಂಪ ಆಗಿದೆ ಎಂದು ಜನ ಹೆದರಿ ಮನೆಯಿಂದ ಹೊರಗೆ ಓಡಿಬಂದಿದ್ದರು. ತೀರ್ಥಹಳ್ಳಿ, ಕೊಪ್ಪ , ಕಡೂರು ಹೀಗೆ ಮಲೆನಾಡಿನಾದ್ಯಂತ ನಿನ್ನೆ ರಾತ್ರಿ ಈ ಭಾರೀ ಸದ್ದು ಆತಂಕಕ್ಕೆ ಕಾರಣವಾಗಿತ್ತು.
ರೈಲ್ವೆ ಕ್ರಷರ್ನಲ್ಲಿ ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ತರಲಾಗಿದ್ದ ಡೈನಮೈಟ್ ಸ್ಪೋಟಕ ಅನ್ ಲೋಡಿಂಗ್ ವೇಳೆ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಮೃತದೇಹಗಳು ಛಿದ್ರವಾಗಿ ಬಿದ್ದಿದ್ದು ಗುರುತು ಸಿಗದಂತಾಗಿದೆ.
ಸ್ಪೋಟ ನಡೆದ ಸ್ಥಳಕ್ಕೆ ರಾತ್ರಿಯೇ ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸ್ಫೋಟದ ಸಾಧ್ಯತೆ ಇರುವ ಡೈನಮೈಟ್ ಪತ್ತೆಗಾಗಿ ಮಂಗಳೂರು ಮತ್ತು ಬೆಂಗಳೂರಿನಿಂದ ಎರಡು ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸದ್ಯ ಘಟನಾ ಸ್ಥಳದ ಸುತ್ತ ಬ್ಯಾರಿಕೇಡ್ ಹಾಕಿ ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದೆ. ಸ್ಥಳಕ್ಕೆ ಯಾರನ್ನೂ ಒಳ ಬರದಂತೆ ನಿರ್ಬಂಧ ಹೇರಿದ್ದು ಪೊಲೀಸರು ಸರ್ಪಗಾವಲು ಹಾಕಿದ್ದಾರೆ.
Eight people were killed in an explosion at a stone mining quarry in at Hunasondi near village Abbalagere of Shivamogga district.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am