ಬ್ರೇಕಿಂಗ್ ನ್ಯೂಸ್
22-01-21 09:10 am Santosh ಕರ್ನಾಟಕ
ಶಿವಮೊಗ್ಗ, ಜನವರಿ 22: ಇಲ್ಲಿನ ಹುಣಸವಾಡಿಯ ಅಬ್ಬಲಗೇರಿ ಎಂಬಲ್ಲಿ ರೈಲ್ವೆ ಇಲಾಖೆಗೆ ಸೇರಿದ ಕ್ರಷರ್ನಲ್ಲಿ ಭಾರಿ ಸ್ಪೋಟ ಸಂಭವಿಸಿದ್ದು ಹತ್ತಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ಲೋಡ್ ಗಟ್ಟಲೆ ಡೈನಾಮೈಟ್ ಸಾಗಿಸುತ್ತಿದ್ದ ವೇಳೆ ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಸ್ಫೋಟಗೊಂಡಿದೆ. ಸ್ಫೋಟಗೊಂಡ ಲಾರಿಯಲ್ಲಿ ಎಷ್ಟು ಮಂದಿ ಇದ್ದರು, ಕ್ರಷರ್ ಬಳಿ ಎಷ್ಟು ಮಂದಿ ಇದ್ದರು ಎಂಬ ಸರಿಯಾದ ಮಾಹಿತಿ ಯಾರಲ್ಲೂ ಇಲ್ಲ. ಸ್ಫೋಟದ ತೀವ್ರತೆಗೆ ದೇಹ ಛಿದ್ರಗೊಂಡು ಕಿಮೀ ದೂರಕ್ಕೆ ಎಸೆಯಲ್ಪಟ್ಟಿದೆ. ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ.


ಸ್ಫೋಟದ ಸದ್ದು ಇಡೀ ಶಿವಮೊಗ್ಗ , ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೇಳಿಬಂದಿದ್ದು ಭೂಕಂಪ ಆಗಿದೆ ಎಂದು ಜನ ಹೆದರಿ ಮನೆಯಿಂದ ಹೊರಗೆ ಓಡಿಬಂದಿದ್ದರು. ತೀರ್ಥಹಳ್ಳಿ, ಕೊಪ್ಪ , ಕಡೂರು ಹೀಗೆ ಮಲೆನಾಡಿನಾದ್ಯಂತ ನಿನ್ನೆ ರಾತ್ರಿ ಈ ಭಾರೀ ಸದ್ದು ಆತಂಕಕ್ಕೆ ಕಾರಣವಾಗಿತ್ತು.
ರೈಲ್ವೆ ಕ್ರಷರ್ನಲ್ಲಿ ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ತರಲಾಗಿದ್ದ ಡೈನಮೈಟ್ ಸ್ಪೋಟಕ ಅನ್ ಲೋಡಿಂಗ್ ವೇಳೆ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಮೃತದೇಹಗಳು ಛಿದ್ರವಾಗಿ ಬಿದ್ದಿದ್ದು ಗುರುತು ಸಿಗದಂತಾಗಿದೆ.
ಸ್ಪೋಟ ನಡೆದ ಸ್ಥಳಕ್ಕೆ ರಾತ್ರಿಯೇ ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸ್ಫೋಟದ ಸಾಧ್ಯತೆ ಇರುವ ಡೈನಮೈಟ್ ಪತ್ತೆಗಾಗಿ ಮಂಗಳೂರು ಮತ್ತು ಬೆಂಗಳೂರಿನಿಂದ ಎರಡು ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸದ್ಯ ಘಟನಾ ಸ್ಥಳದ ಸುತ್ತ ಬ್ಯಾರಿಕೇಡ್ ಹಾಕಿ ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದೆ. ಸ್ಥಳಕ್ಕೆ ಯಾರನ್ನೂ ಒಳ ಬರದಂತೆ ನಿರ್ಬಂಧ ಹೇರಿದ್ದು ಪೊಲೀಸರು ಸರ್ಪಗಾವಲು ಹಾಕಿದ್ದಾರೆ.
Eight people were killed in an explosion at a stone mining quarry in at Hunasondi near village Abbalagere of Shivamogga district.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm