ಬ್ರೇಕಿಂಗ್ ನ್ಯೂಸ್
22-01-21 09:10 am Santosh ಕರ್ನಾಟಕ
ಶಿವಮೊಗ್ಗ, ಜನವರಿ 22: ಇಲ್ಲಿನ ಹುಣಸವಾಡಿಯ ಅಬ್ಬಲಗೇರಿ ಎಂಬಲ್ಲಿ ರೈಲ್ವೆ ಇಲಾಖೆಗೆ ಸೇರಿದ ಕ್ರಷರ್ನಲ್ಲಿ ಭಾರಿ ಸ್ಪೋಟ ಸಂಭವಿಸಿದ್ದು ಹತ್ತಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ಲೋಡ್ ಗಟ್ಟಲೆ ಡೈನಾಮೈಟ್ ಸಾಗಿಸುತ್ತಿದ್ದ ವೇಳೆ ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಸ್ಫೋಟಗೊಂಡಿದೆ. ಸ್ಫೋಟಗೊಂಡ ಲಾರಿಯಲ್ಲಿ ಎಷ್ಟು ಮಂದಿ ಇದ್ದರು, ಕ್ರಷರ್ ಬಳಿ ಎಷ್ಟು ಮಂದಿ ಇದ್ದರು ಎಂಬ ಸರಿಯಾದ ಮಾಹಿತಿ ಯಾರಲ್ಲೂ ಇಲ್ಲ. ಸ್ಫೋಟದ ತೀವ್ರತೆಗೆ ದೇಹ ಛಿದ್ರಗೊಂಡು ಕಿಮೀ ದೂರಕ್ಕೆ ಎಸೆಯಲ್ಪಟ್ಟಿದೆ. ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ.


ಸ್ಫೋಟದ ಸದ್ದು ಇಡೀ ಶಿವಮೊಗ್ಗ , ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೇಳಿಬಂದಿದ್ದು ಭೂಕಂಪ ಆಗಿದೆ ಎಂದು ಜನ ಹೆದರಿ ಮನೆಯಿಂದ ಹೊರಗೆ ಓಡಿಬಂದಿದ್ದರು. ತೀರ್ಥಹಳ್ಳಿ, ಕೊಪ್ಪ , ಕಡೂರು ಹೀಗೆ ಮಲೆನಾಡಿನಾದ್ಯಂತ ನಿನ್ನೆ ರಾತ್ರಿ ಈ ಭಾರೀ ಸದ್ದು ಆತಂಕಕ್ಕೆ ಕಾರಣವಾಗಿತ್ತು.
ರೈಲ್ವೆ ಕ್ರಷರ್ನಲ್ಲಿ ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ತರಲಾಗಿದ್ದ ಡೈನಮೈಟ್ ಸ್ಪೋಟಕ ಅನ್ ಲೋಡಿಂಗ್ ವೇಳೆ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಮೃತದೇಹಗಳು ಛಿದ್ರವಾಗಿ ಬಿದ್ದಿದ್ದು ಗುರುತು ಸಿಗದಂತಾಗಿದೆ.
ಸ್ಪೋಟ ನಡೆದ ಸ್ಥಳಕ್ಕೆ ರಾತ್ರಿಯೇ ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸ್ಫೋಟದ ಸಾಧ್ಯತೆ ಇರುವ ಡೈನಮೈಟ್ ಪತ್ತೆಗಾಗಿ ಮಂಗಳೂರು ಮತ್ತು ಬೆಂಗಳೂರಿನಿಂದ ಎರಡು ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸದ್ಯ ಘಟನಾ ಸ್ಥಳದ ಸುತ್ತ ಬ್ಯಾರಿಕೇಡ್ ಹಾಕಿ ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದೆ. ಸ್ಥಳಕ್ಕೆ ಯಾರನ್ನೂ ಒಳ ಬರದಂತೆ ನಿರ್ಬಂಧ ಹೇರಿದ್ದು ಪೊಲೀಸರು ಸರ್ಪಗಾವಲು ಹಾಕಿದ್ದಾರೆ.
Eight people were killed in an explosion at a stone mining quarry in at Hunasondi near village Abbalagere of Shivamogga district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm