ಬ್ರೇಕಿಂಗ್ ನ್ಯೂಸ್
22-01-21 06:15 pm Headline Karnataka News Network ಕರ್ನಾಟಕ
ಶಿವಮೊಗ್ಗ, ಜ.22: ಹುಣಸೋಡಿನಲ್ಲಿ ನಡೆದ ಕ್ವಾರಿ ಬ್ಲಾಸ್ಟ್ ದುರಂತದ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಸ್ಫೋಟ ನಡೆದ ಹುಣಸೋಡಿನ ಅಬ್ಬಗೇರಿಯ ಘಟನಾ ಸ್ಥಳಕ್ಕೆ ಆಗಮಿಸಿದ ಮುರುಗೇಶ್ ನಿರಾಣಿ, ಸ್ಥಳ ವೀಕ್ಷಿಸಿ ಗಾಬರಿ ವ್ಯಕ್ತಪಡಿಸಿದರು. ಸ್ಫೋಟ ಸಂಭವಿಸಿದ್ದ ಲಾರಿ ಗುರುತು ಸಿಗದಷ್ಟು ಅಪ್ಪಚ್ಚಿಯಾಗಿದ್ದನ್ನು ಕಂಡು ಸಚಿವರು ಮತ್ತು ಅಧಿಕಾರಿಗಳು ದಿಗ್ಭ್ರಮೆ ವ್ಯಕ್ತಪಡಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗಣಿಗಾರಿಕೆಗೆ ಅನುಮತಿ ಪಡೆದುಕೊಂಡಿದ್ದಾರೆಯೇ ಅಥವಾ ಕಾನೂನು ಉಲ್ಲಂಘಿಸಿ ಗಣಿಗಾರಿಕೆ ನಡೆಸುತ್ತಿದ್ದರೇ.. ಯಾರೆಲ್ಲಾ ಈ ಗಣಿಯ ಹಿಂದೆ ಇದ್ದಾರೆ, ಹೀಗೆ ಎಲ್ಲದರ ಬಗ್ಗೆಯೂ ತನಿಖೆ ನಡೆಸಲಾಗುವುದು. ಮತ್ತು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಇಂಥ ದುರ್ಘಟನೆ ನಡೆಯದಂತೆ ನೋಡಿಕೊಳ್ಳಲಾಗುವುದು. ಘಟನೆಗೆ ಡೈನಮೈಟ್ ಕಾರಣವೋ ಬೇರೆ ಇನ್ನೇನಾದ್ರೂ ಸ್ಫೋಟಕ ಕಾರಣವಾಗಿತ್ತೇ ಎನ್ನೋದ್ರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿಗಳು ಈಗಾಗ್ಲೇ ದುರಂತದಲ್ಲಿ ಮಡಿದವರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ಘೋಷಿಸಿದ್ದಾರೆ. ಕಾರ್ಮಿಕ ಇಲಾಖೆ ಮತ್ತು ಗಣಿ ಇಲಾಖೆಯ ವತಿಯಿಂದ ಹೆಚ್ಚುವರಿ ಪರಿಹಾರ ನೀಡಲಾಗುವುದು ಎಂದು ಹೇಳಿದರು.


15 ಕಾರ್ಮಿಕರ ಪೈಕಿ ಸಿಕ್ಕಿದ್ದು ಐದೇ ಶವ !
ಈವರೆಗೆ ಐದು ಮಂದಿ ಕಾರ್ಮಿಕರ ಶವಗಳು ಮಾತ್ರ ಸ್ಥಳದಲ್ಲಿ ದೊರೆತಿವೆ. ಆದರೆ, ಅ ಜಾಗದಲ್ಲಿ 15ಕ್ಕೂ ಹೆಚ್ಚು ರಾತ್ರಿ ವೇಳೆ ಇದ್ದರು ಎನ್ನಲಾಗುತ್ತಿದೆ. ಉಳಿದವರು ಎಲ್ಲಿ ಹೋಗಿದ್ದಾರೆ, ಪೂರ್ತಿ ನಾಶವಾಗಿದ್ದಾರೆಯೇ ಎನ್ನುವ ಬಗ್ಗೆ ಅಲ್ಲಿನ ಯಾರಲ್ಲೂ ಮಾಹಿತಿ ಇರಲಿಲ್ಲ. ಸತ್ತಿರುವ ಮಂದಿ ಬಿಹಾರದವರು ಮತ್ತು ಅಲ್ಲಿ ಕಾರ್ಮಿಕರಾಗಿದ್ದು ಬಿಹಾರ ಸೇರಿದಂತೆ ಉತ್ತರ ಭಾರತೀಯರೇ ಆಗಿರುವುದರಿಂದ ಎಷ್ಟು ಮಂದಿ ಇದ್ದರು. ಮತ್ತು ಅವರ ವಿಳಾಸ ಗಣಿ ಮಾಡುತ್ತಿದವರ ಬಳಿಯೂ ಇಲ್ಲ.
ಶಿವಮೊಗ್ಗದಲ್ಲಿ ಸ್ಫೋಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ, ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಮೋದಿ
Newly appointed mines and geology minister Murgesh Nirani has rushed to the blast site in Shivamogga.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 08:30 pm
HK News Staffer
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm