ಬ್ರೇಕಿಂಗ್ ನ್ಯೂಸ್
23-01-21 02:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.23: ಕರ್ನಾಟಕದಲ್ಲಿ ಜಾರಿಗೆ ಬಂದ ನೂತನ ಗೋಹತ್ಯೆ ನಿಷೇಧ ಕಾಯ್ದೆಯಡಿ ಮೊದಲ ಪ್ರಕರಣ ವಿಜಯಪುರ ಜಿಲ್ಲೆಯ ಕೂಡ್ಗಿಯಲ್ಲಿ ದಾಖಲಾಗಿದೆ. ಕೂಡ್ಗಿ ಸಣ್ಣ ಗ್ರಾಮವಾಗಿದ್ದು, ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 13 ವಿಜಯಪುರ ಜಿಲ್ಲೆಯನ್ನು ಹಾದುಹೋಗುವಲ್ಲಿ ಸಿಗುತ್ತದೆ.
ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು, ಕೂಡ್ಗಿ ಗ್ರಾಮದ ಸಿಕಂದರ್ ಸಾಬ್ ರಾಜೇಸಾಬ್ ಬೇಪಾರಿ ಎಂಬ ವ್ಯಕ್ತಿಯನ್ನು ಬಸವನಬಾಗೇವಾಡಿ ಪೊಲೀಸರು ಬಂಧಿಸಿದ್ದಾಗಿ ತಿಳಿಸಿದ್ದಾರೆ. ಗ್ರಾಮದ ರೈಲ್ವೇ ಹಳಿಯ ಬದಿ ಟಿನ್ ಶೆಡ್ ಹಾಕ್ಕೊಂಡು ಸಿಕಂದರ್ ಸಾಬ್ ಗೋವಿನ ಮಾಂಸವನ್ನು ಮಾರುತ್ತಿದ್ದ ವೇಳೆ ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದರು. ಒಂದು ಎತ್ತನ್ನು ಕೊಂದು ಮಾಂಸ ಮಾಡಿದ್ದ. ಇನ್ನೊಂದು ಎತ್ತನ್ನು ಕಡಿಯುವುದಕ್ಕಾಗಿ ಕಟ್ಟಿ ಹಾಕಿದ್ದ. ಅದನ್ನು ಪೊಲೀಸರು ವಶಕ್ಕೆ ಪಡೆದು ರಕ್ಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ದನ, ಎತ್ತುಗಳನ್ನು ಸಂರಕ್ಷಿಸುವುದಕ್ಕಾಗಿ ಈ ಕಾನೂನು ತರಲಾಗಿದೆ. ಕಾಯ್ದೆ ಇದೆಯೆಂದು ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಪೊಲೀಸರು ತಮ್ಮ ಕೆಲಸವನ್ನು ಮಾಡುತ್ತಾರೆ. ಜನರು ದನ, ಎತ್ತು, ಕರು, ಎಮ್ಮೆ ಹೀಗೆ ಜಾನುವಾರುಗಳನ್ನು ಕಳ್ಳಸಾಗಾಣಿಕೆ ಅಥವಾ ಕಡಿಯುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಸಾಕು, ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದು, ಜ.18ರಿಂದ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಕಾಯ್ದೆ ಪ್ರಕಾರ, ಜಾನುವಾರುಗಳ ಅಕ್ರಮ ಸಾಗಣೆ ಮತ್ತು ವಧೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಪ್ರಕರಣ ದಾಖಲಾದರೆ ಆರೋಪಿಗಳಿಗೆ ಐದು ವರ್ಷಗಳ ಶಿಕ್ಷೆ ವಿಧಿಸಲು ಅವಕಾಶವಿದೆ.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm