ಬ್ರೇಕಿಂಗ್ ನ್ಯೂಸ್
23-01-21 02:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.23: ಕರ್ನಾಟಕದಲ್ಲಿ ಜಾರಿಗೆ ಬಂದ ನೂತನ ಗೋಹತ್ಯೆ ನಿಷೇಧ ಕಾಯ್ದೆಯಡಿ ಮೊದಲ ಪ್ರಕರಣ ವಿಜಯಪುರ ಜಿಲ್ಲೆಯ ಕೂಡ್ಗಿಯಲ್ಲಿ ದಾಖಲಾಗಿದೆ. ಕೂಡ್ಗಿ ಸಣ್ಣ ಗ್ರಾಮವಾಗಿದ್ದು, ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 13 ವಿಜಯಪುರ ಜಿಲ್ಲೆಯನ್ನು ಹಾದುಹೋಗುವಲ್ಲಿ ಸಿಗುತ್ತದೆ.
ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು, ಕೂಡ್ಗಿ ಗ್ರಾಮದ ಸಿಕಂದರ್ ಸಾಬ್ ರಾಜೇಸಾಬ್ ಬೇಪಾರಿ ಎಂಬ ವ್ಯಕ್ತಿಯನ್ನು ಬಸವನಬಾಗೇವಾಡಿ ಪೊಲೀಸರು ಬಂಧಿಸಿದ್ದಾಗಿ ತಿಳಿಸಿದ್ದಾರೆ. ಗ್ರಾಮದ ರೈಲ್ವೇ ಹಳಿಯ ಬದಿ ಟಿನ್ ಶೆಡ್ ಹಾಕ್ಕೊಂಡು ಸಿಕಂದರ್ ಸಾಬ್ ಗೋವಿನ ಮಾಂಸವನ್ನು ಮಾರುತ್ತಿದ್ದ ವೇಳೆ ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದರು. ಒಂದು ಎತ್ತನ್ನು ಕೊಂದು ಮಾಂಸ ಮಾಡಿದ್ದ. ಇನ್ನೊಂದು ಎತ್ತನ್ನು ಕಡಿಯುವುದಕ್ಕಾಗಿ ಕಟ್ಟಿ ಹಾಕಿದ್ದ. ಅದನ್ನು ಪೊಲೀಸರು ವಶಕ್ಕೆ ಪಡೆದು ರಕ್ಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ದನ, ಎತ್ತುಗಳನ್ನು ಸಂರಕ್ಷಿಸುವುದಕ್ಕಾಗಿ ಈ ಕಾನೂನು ತರಲಾಗಿದೆ. ಕಾಯ್ದೆ ಇದೆಯೆಂದು ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಪೊಲೀಸರು ತಮ್ಮ ಕೆಲಸವನ್ನು ಮಾಡುತ್ತಾರೆ. ಜನರು ದನ, ಎತ್ತು, ಕರು, ಎಮ್ಮೆ ಹೀಗೆ ಜಾನುವಾರುಗಳನ್ನು ಕಳ್ಳಸಾಗಾಣಿಕೆ ಅಥವಾ ಕಡಿಯುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಸಾಕು, ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದು, ಜ.18ರಿಂದ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಕಾಯ್ದೆ ಪ್ರಕಾರ, ಜಾನುವಾರುಗಳ ಅಕ್ರಮ ಸಾಗಣೆ ಮತ್ತು ವಧೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಪ್ರಕರಣ ದಾಖಲಾದರೆ ಆರೋಪಿಗಳಿಗೆ ಐದು ವರ್ಷಗಳ ಶಿಕ್ಷೆ ವಿಧಿಸಲು ಅವಕಾಶವಿದೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm