ಬ್ರೇಕಿಂಗ್ ನ್ಯೂಸ್
23-01-21 02:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.23: ಕರ್ನಾಟಕದಲ್ಲಿ ಜಾರಿಗೆ ಬಂದ ನೂತನ ಗೋಹತ್ಯೆ ನಿಷೇಧ ಕಾಯ್ದೆಯಡಿ ಮೊದಲ ಪ್ರಕರಣ ವಿಜಯಪುರ ಜಿಲ್ಲೆಯ ಕೂಡ್ಗಿಯಲ್ಲಿ ದಾಖಲಾಗಿದೆ. ಕೂಡ್ಗಿ ಸಣ್ಣ ಗ್ರಾಮವಾಗಿದ್ದು, ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 13 ವಿಜಯಪುರ ಜಿಲ್ಲೆಯನ್ನು ಹಾದುಹೋಗುವಲ್ಲಿ ಸಿಗುತ್ತದೆ.
ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು, ಕೂಡ್ಗಿ ಗ್ರಾಮದ ಸಿಕಂದರ್ ಸಾಬ್ ರಾಜೇಸಾಬ್ ಬೇಪಾರಿ ಎಂಬ ವ್ಯಕ್ತಿಯನ್ನು ಬಸವನಬಾಗೇವಾಡಿ ಪೊಲೀಸರು ಬಂಧಿಸಿದ್ದಾಗಿ ತಿಳಿಸಿದ್ದಾರೆ. ಗ್ರಾಮದ ರೈಲ್ವೇ ಹಳಿಯ ಬದಿ ಟಿನ್ ಶೆಡ್ ಹಾಕ್ಕೊಂಡು ಸಿಕಂದರ್ ಸಾಬ್ ಗೋವಿನ ಮಾಂಸವನ್ನು ಮಾರುತ್ತಿದ್ದ ವೇಳೆ ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದರು. ಒಂದು ಎತ್ತನ್ನು ಕೊಂದು ಮಾಂಸ ಮಾಡಿದ್ದ. ಇನ್ನೊಂದು ಎತ್ತನ್ನು ಕಡಿಯುವುದಕ್ಕಾಗಿ ಕಟ್ಟಿ ಹಾಕಿದ್ದ. ಅದನ್ನು ಪೊಲೀಸರು ವಶಕ್ಕೆ ಪಡೆದು ರಕ್ಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ದನ, ಎತ್ತುಗಳನ್ನು ಸಂರಕ್ಷಿಸುವುದಕ್ಕಾಗಿ ಈ ಕಾನೂನು ತರಲಾಗಿದೆ. ಕಾಯ್ದೆ ಇದೆಯೆಂದು ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಪೊಲೀಸರು ತಮ್ಮ ಕೆಲಸವನ್ನು ಮಾಡುತ್ತಾರೆ. ಜನರು ದನ, ಎತ್ತು, ಕರು, ಎಮ್ಮೆ ಹೀಗೆ ಜಾನುವಾರುಗಳನ್ನು ಕಳ್ಳಸಾಗಾಣಿಕೆ ಅಥವಾ ಕಡಿಯುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಸಾಕು, ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದು, ಜ.18ರಿಂದ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಕಾಯ್ದೆ ಪ್ರಕಾರ, ಜಾನುವಾರುಗಳ ಅಕ್ರಮ ಸಾಗಣೆ ಮತ್ತು ವಧೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಪ್ರಕರಣ ದಾಖಲಾದರೆ ಆರೋಪಿಗಳಿಗೆ ಐದು ವರ್ಷಗಳ ಶಿಕ್ಷೆ ವಿಧಿಸಲು ಅವಕಾಶವಿದೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm