ಬ್ರೇಕಿಂಗ್ ನ್ಯೂಸ್
23-01-21 02:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.23: ಕರ್ನಾಟಕದಲ್ಲಿ ಜಾರಿಗೆ ಬಂದ ನೂತನ ಗೋಹತ್ಯೆ ನಿಷೇಧ ಕಾಯ್ದೆಯಡಿ ಮೊದಲ ಪ್ರಕರಣ ವಿಜಯಪುರ ಜಿಲ್ಲೆಯ ಕೂಡ್ಗಿಯಲ್ಲಿ ದಾಖಲಾಗಿದೆ. ಕೂಡ್ಗಿ ಸಣ್ಣ ಗ್ರಾಮವಾಗಿದ್ದು, ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 13 ವಿಜಯಪುರ ಜಿಲ್ಲೆಯನ್ನು ಹಾದುಹೋಗುವಲ್ಲಿ ಸಿಗುತ್ತದೆ.
ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು, ಕೂಡ್ಗಿ ಗ್ರಾಮದ ಸಿಕಂದರ್ ಸಾಬ್ ರಾಜೇಸಾಬ್ ಬೇಪಾರಿ ಎಂಬ ವ್ಯಕ್ತಿಯನ್ನು ಬಸವನಬಾಗೇವಾಡಿ ಪೊಲೀಸರು ಬಂಧಿಸಿದ್ದಾಗಿ ತಿಳಿಸಿದ್ದಾರೆ. ಗ್ರಾಮದ ರೈಲ್ವೇ ಹಳಿಯ ಬದಿ ಟಿನ್ ಶೆಡ್ ಹಾಕ್ಕೊಂಡು ಸಿಕಂದರ್ ಸಾಬ್ ಗೋವಿನ ಮಾಂಸವನ್ನು ಮಾರುತ್ತಿದ್ದ ವೇಳೆ ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದರು. ಒಂದು ಎತ್ತನ್ನು ಕೊಂದು ಮಾಂಸ ಮಾಡಿದ್ದ. ಇನ್ನೊಂದು ಎತ್ತನ್ನು ಕಡಿಯುವುದಕ್ಕಾಗಿ ಕಟ್ಟಿ ಹಾಕಿದ್ದ. ಅದನ್ನು ಪೊಲೀಸರು ವಶಕ್ಕೆ ಪಡೆದು ರಕ್ಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ದನ, ಎತ್ತುಗಳನ್ನು ಸಂರಕ್ಷಿಸುವುದಕ್ಕಾಗಿ ಈ ಕಾನೂನು ತರಲಾಗಿದೆ. ಕಾಯ್ದೆ ಇದೆಯೆಂದು ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಪೊಲೀಸರು ತಮ್ಮ ಕೆಲಸವನ್ನು ಮಾಡುತ್ತಾರೆ. ಜನರು ದನ, ಎತ್ತು, ಕರು, ಎಮ್ಮೆ ಹೀಗೆ ಜಾನುವಾರುಗಳನ್ನು ಕಳ್ಳಸಾಗಾಣಿಕೆ ಅಥವಾ ಕಡಿಯುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಸಾಕು, ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದು, ಜ.18ರಿಂದ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಕಾಯ್ದೆ ಪ್ರಕಾರ, ಜಾನುವಾರುಗಳ ಅಕ್ರಮ ಸಾಗಣೆ ಮತ್ತು ವಧೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಪ್ರಕರಣ ದಾಖಲಾದರೆ ಆರೋಪಿಗಳಿಗೆ ಐದು ವರ್ಷಗಳ ಶಿಕ್ಷೆ ವಿಧಿಸಲು ಅವಕಾಶವಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm