ಬ್ರೇಕಿಂಗ್ ನ್ಯೂಸ್
23-01-21 02:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.23: ಕರ್ನಾಟಕದಲ್ಲಿ ಜಾರಿಗೆ ಬಂದ ನೂತನ ಗೋಹತ್ಯೆ ನಿಷೇಧ ಕಾಯ್ದೆಯಡಿ ಮೊದಲ ಪ್ರಕರಣ ವಿಜಯಪುರ ಜಿಲ್ಲೆಯ ಕೂಡ್ಗಿಯಲ್ಲಿ ದಾಖಲಾಗಿದೆ. ಕೂಡ್ಗಿ ಸಣ್ಣ ಗ್ರಾಮವಾಗಿದ್ದು, ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 13 ವಿಜಯಪುರ ಜಿಲ್ಲೆಯನ್ನು ಹಾದುಹೋಗುವಲ್ಲಿ ಸಿಗುತ್ತದೆ.
ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು, ಕೂಡ್ಗಿ ಗ್ರಾಮದ ಸಿಕಂದರ್ ಸಾಬ್ ರಾಜೇಸಾಬ್ ಬೇಪಾರಿ ಎಂಬ ವ್ಯಕ್ತಿಯನ್ನು ಬಸವನಬಾಗೇವಾಡಿ ಪೊಲೀಸರು ಬಂಧಿಸಿದ್ದಾಗಿ ತಿಳಿಸಿದ್ದಾರೆ. ಗ್ರಾಮದ ರೈಲ್ವೇ ಹಳಿಯ ಬದಿ ಟಿನ್ ಶೆಡ್ ಹಾಕ್ಕೊಂಡು ಸಿಕಂದರ್ ಸಾಬ್ ಗೋವಿನ ಮಾಂಸವನ್ನು ಮಾರುತ್ತಿದ್ದ ವೇಳೆ ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದರು. ಒಂದು ಎತ್ತನ್ನು ಕೊಂದು ಮಾಂಸ ಮಾಡಿದ್ದ. ಇನ್ನೊಂದು ಎತ್ತನ್ನು ಕಡಿಯುವುದಕ್ಕಾಗಿ ಕಟ್ಟಿ ಹಾಕಿದ್ದ. ಅದನ್ನು ಪೊಲೀಸರು ವಶಕ್ಕೆ ಪಡೆದು ರಕ್ಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ದನ, ಎತ್ತುಗಳನ್ನು ಸಂರಕ್ಷಿಸುವುದಕ್ಕಾಗಿ ಈ ಕಾನೂನು ತರಲಾಗಿದೆ. ಕಾಯ್ದೆ ಇದೆಯೆಂದು ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಪೊಲೀಸರು ತಮ್ಮ ಕೆಲಸವನ್ನು ಮಾಡುತ್ತಾರೆ. ಜನರು ದನ, ಎತ್ತು, ಕರು, ಎಮ್ಮೆ ಹೀಗೆ ಜಾನುವಾರುಗಳನ್ನು ಕಳ್ಳಸಾಗಾಣಿಕೆ ಅಥವಾ ಕಡಿಯುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಸಾಕು, ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದು, ಜ.18ರಿಂದ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಕಾಯ್ದೆ ಪ್ರಕಾರ, ಜಾನುವಾರುಗಳ ಅಕ್ರಮ ಸಾಗಣೆ ಮತ್ತು ವಧೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಪ್ರಕರಣ ದಾಖಲಾದರೆ ಆರೋಪಿಗಳಿಗೆ ಐದು ವರ್ಷಗಳ ಶಿಕ್ಷೆ ವಿಧಿಸಲು ಅವಕಾಶವಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm