ಬ್ರೇಕಿಂಗ್ ನ್ಯೂಸ್
23-01-21 02:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.23: ಕರ್ನಾಟಕದಲ್ಲಿ ಜಾರಿಗೆ ಬಂದ ನೂತನ ಗೋಹತ್ಯೆ ನಿಷೇಧ ಕಾಯ್ದೆಯಡಿ ಮೊದಲ ಪ್ರಕರಣ ವಿಜಯಪುರ ಜಿಲ್ಲೆಯ ಕೂಡ್ಗಿಯಲ್ಲಿ ದಾಖಲಾಗಿದೆ. ಕೂಡ್ಗಿ ಸಣ್ಣ ಗ್ರಾಮವಾಗಿದ್ದು, ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 13 ವಿಜಯಪುರ ಜಿಲ್ಲೆಯನ್ನು ಹಾದುಹೋಗುವಲ್ಲಿ ಸಿಗುತ್ತದೆ.
ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು, ಕೂಡ್ಗಿ ಗ್ರಾಮದ ಸಿಕಂದರ್ ಸಾಬ್ ರಾಜೇಸಾಬ್ ಬೇಪಾರಿ ಎಂಬ ವ್ಯಕ್ತಿಯನ್ನು ಬಸವನಬಾಗೇವಾಡಿ ಪೊಲೀಸರು ಬಂಧಿಸಿದ್ದಾಗಿ ತಿಳಿಸಿದ್ದಾರೆ. ಗ್ರಾಮದ ರೈಲ್ವೇ ಹಳಿಯ ಬದಿ ಟಿನ್ ಶೆಡ್ ಹಾಕ್ಕೊಂಡು ಸಿಕಂದರ್ ಸಾಬ್ ಗೋವಿನ ಮಾಂಸವನ್ನು ಮಾರುತ್ತಿದ್ದ ವೇಳೆ ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದರು. ಒಂದು ಎತ್ತನ್ನು ಕೊಂದು ಮಾಂಸ ಮಾಡಿದ್ದ. ಇನ್ನೊಂದು ಎತ್ತನ್ನು ಕಡಿಯುವುದಕ್ಕಾಗಿ ಕಟ್ಟಿ ಹಾಕಿದ್ದ. ಅದನ್ನು ಪೊಲೀಸರು ವಶಕ್ಕೆ ಪಡೆದು ರಕ್ಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ದನ, ಎತ್ತುಗಳನ್ನು ಸಂರಕ್ಷಿಸುವುದಕ್ಕಾಗಿ ಈ ಕಾನೂನು ತರಲಾಗಿದೆ. ಕಾಯ್ದೆ ಇದೆಯೆಂದು ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಪೊಲೀಸರು ತಮ್ಮ ಕೆಲಸವನ್ನು ಮಾಡುತ್ತಾರೆ. ಜನರು ದನ, ಎತ್ತು, ಕರು, ಎಮ್ಮೆ ಹೀಗೆ ಜಾನುವಾರುಗಳನ್ನು ಕಳ್ಳಸಾಗಾಣಿಕೆ ಅಥವಾ ಕಡಿಯುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಸಾಕು, ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದು, ಜ.18ರಿಂದ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಕಾಯ್ದೆ ಪ್ರಕಾರ, ಜಾನುವಾರುಗಳ ಅಕ್ರಮ ಸಾಗಣೆ ಮತ್ತು ವಧೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಪ್ರಕರಣ ದಾಖಲಾದರೆ ಆರೋಪಿಗಳಿಗೆ ಐದು ವರ್ಷಗಳ ಶಿಕ್ಷೆ ವಿಧಿಸಲು ಅವಕಾಶವಿದೆ.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 04:00 pm
Udupi Correspondent
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm