ಬ್ರೇಕಿಂಗ್ ನ್ಯೂಸ್
25-01-21 05:51 pm Bangalore Correspondent ಕರ್ನಾಟಕ
ಬೆಂಗಳೂರು, ಜ.25; ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. ಅಷ್ಟರಲ್ಲೇ ಜೆಡಿಎಸ್ ಚುನಾವಣೆಗೆ ತಯಾರಿ ಆರಂಭಿಸಿದೆ. ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಅಭ್ಯರ್ಥಿಗಳ ಘೋಷಣೆಗೆ ಮುಂದಾಗಿದೆ.
ಬೆಂಗಳೂರಿನ ಜೆ.ಪಿ. ನಗರದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ಆನೇಕಲ್ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಘೋಷಣೆ ಮಾಡಿದ್ದಾರೆ. ಆನೇಕಲ್ ಕ್ಷೇತ್ರದಿಂದ ಕೆ.ಪಿ.ರಾಜು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ ರೆಡ್ಡಿ ಅವರ ಹೆಸರನ್ನು ಅಭ್ಯರ್ಥಿಗಳಾಗಿಸಿ ಘೋಷಣೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಳೆದ ಬಾರಿ ಬಿಎಸ್ಪಿ ಜೊತೆ ಮೈತ್ರಿ ಮಾಡಿದ್ದು ದುಬಾರಿಯಾಯ್ತು. ಈ ಬಾರಿ ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ. ಏಕಾಂಗಿಯಾಗಿ ಚುನಾವಣೆ ಎದುರಿಸುತ್ತೇವೆ. ಮುಂದಿನ ಬಾರಿ ಅಧಿಕಾರಕ್ಕೆ ಬರಲೇಬೇಕೆಂಬ ನೆಲೆಯಲ್ಲಿ ಈಗಲೇ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದೇನೆ. ಪಕ್ಷ ತಳಮಟ್ಟದಲ್ಲಿ ಗಟ್ಟಿಗೊಳಿಸಲು ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದ್ದೇನೆ. ಈಗಿನಿಂದಲೇ ಚುನಾವಣೆ ತಯಾರಿ ಮಾಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.
ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ಎಚ್ಡಿ ಕುಮಾರಸ್ವಾಮಿ, ಮುಂದಿನ ಬಾರಿ ಹೇಗಾದರೂ ಅಧಿಕಾರ ಗಿಟ್ಟಿಸಿಕೊಳ್ಳಬೇಕೆಂಬ ನೆಲೆಯಲ್ಲಿ ತಳಹಂತದಲ್ಲಿ ಪಕ್ಷ ಗಟ್ಟಿಗೊಳಿಸುವ ಕೆಲಸಕ್ಕೆ ಕೈಹಾಕಿದ್ದಾರೆ. ಅದಕ್ಕಾಗಿ ಜೆಡಿಎಸ್ ಪ್ರಾಬಲ್ಯ ಇರುವ ಕಡೆ ಸಮಾವೇಶ ನಡೆಸುತ್ತಿದ್ದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುತ್ತಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm