ಬ್ರೇಕಿಂಗ್ ನ್ಯೂಸ್
25-01-21 05:51 pm Bangalore Correspondent ಕರ್ನಾಟಕ
ಬೆಂಗಳೂರು, ಜ.25; ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. ಅಷ್ಟರಲ್ಲೇ ಜೆಡಿಎಸ್ ಚುನಾವಣೆಗೆ ತಯಾರಿ ಆರಂಭಿಸಿದೆ. ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಅಭ್ಯರ್ಥಿಗಳ ಘೋಷಣೆಗೆ ಮುಂದಾಗಿದೆ.
ಬೆಂಗಳೂರಿನ ಜೆ.ಪಿ. ನಗರದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ಆನೇಕಲ್ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಘೋಷಣೆ ಮಾಡಿದ್ದಾರೆ. ಆನೇಕಲ್ ಕ್ಷೇತ್ರದಿಂದ ಕೆ.ಪಿ.ರಾಜು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ ರೆಡ್ಡಿ ಅವರ ಹೆಸರನ್ನು ಅಭ್ಯರ್ಥಿಗಳಾಗಿಸಿ ಘೋಷಣೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಳೆದ ಬಾರಿ ಬಿಎಸ್ಪಿ ಜೊತೆ ಮೈತ್ರಿ ಮಾಡಿದ್ದು ದುಬಾರಿಯಾಯ್ತು. ಈ ಬಾರಿ ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ. ಏಕಾಂಗಿಯಾಗಿ ಚುನಾವಣೆ ಎದುರಿಸುತ್ತೇವೆ. ಮುಂದಿನ ಬಾರಿ ಅಧಿಕಾರಕ್ಕೆ ಬರಲೇಬೇಕೆಂಬ ನೆಲೆಯಲ್ಲಿ ಈಗಲೇ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದೇನೆ. ಪಕ್ಷ ತಳಮಟ್ಟದಲ್ಲಿ ಗಟ್ಟಿಗೊಳಿಸಲು ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದ್ದೇನೆ. ಈಗಿನಿಂದಲೇ ಚುನಾವಣೆ ತಯಾರಿ ಮಾಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.
ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ಎಚ್ಡಿ ಕುಮಾರಸ್ವಾಮಿ, ಮುಂದಿನ ಬಾರಿ ಹೇಗಾದರೂ ಅಧಿಕಾರ ಗಿಟ್ಟಿಸಿಕೊಳ್ಳಬೇಕೆಂಬ ನೆಲೆಯಲ್ಲಿ ತಳಹಂತದಲ್ಲಿ ಪಕ್ಷ ಗಟ್ಟಿಗೊಳಿಸುವ ಕೆಲಸಕ್ಕೆ ಕೈಹಾಕಿದ್ದಾರೆ. ಅದಕ್ಕಾಗಿ ಜೆಡಿಎಸ್ ಪ್ರಾಬಲ್ಯ ಇರುವ ಕಡೆ ಸಮಾವೇಶ ನಡೆಸುತ್ತಿದ್ದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುತ್ತಿದ್ದಾರೆ.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 04:00 pm
Udupi Correspondent
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm