ಶೃಂಗೇರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ; ಪೊಲೀಸರ ವಿರುದ್ಧ ಸೇಡಿಗಾಗಿ ಕುಡುಕನ ಕೃತ್ಯ !

14-08-20 07:55 am       Headline Karnataka News Network   ಕರ್ನಾಟಕ

ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 

ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.

ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 

ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.

ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.

ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್  ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.