ಬ್ರೇಕಿಂಗ್ ನ್ಯೂಸ್
14-08-20 07:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.
ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.
ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.
ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm